ಕಳೆದ ಬಾರಿ ಬೆದರಿದ್ದ ಲಕ್ಷ್ಮೀ ಆನೆ ಈ ಬಾರಿ ಜಗ್ಗದೆ ನಿಂತಿತ್ತು. ಅದರೊಂದಿಗೆ, ಇತರೆ ಹೆಣ್ಣಾನೆಗಳಾದ ಕಾವೇರಿ, ಚೈತ್ರಾ ಸಹ ಬೆದರದೇ ನಿಂತಿದ್ದವು. ಅಭಿಮನ್ಯು ಎಂದಿನಂತೆ ರಾಜಗಾಂಭೀರ್ಯವನ್ನು ಕಾಪಾಡಿಕೊಂಡು ಸೈ ಎನ್ನಿಸಿಕೊಂಡಿತು. ಮಸ್ತಿಯಲ್ಲಿದ್ದ ವಿಕ್ರಮ ಆನೆಯನ್ನು ಈ ಬಾರಿ ತಾಲೀಮಿನಿಂದ ದೂರ ಇರಿಸಲಾಗಿತ್ತು. ಕಳೆದ ಬಾರಿಗಿಂತ ಶಬ್ದದ ತೀವ್ರತೆ ಈ ಬಾರಿ ಹೆಚ್ಚಿತ್ತು.