<p><strong>ಬೆಟ್ಟದಪುರ: </strong>ಇಲ್ಲಿನ ಕೆಇಬಿ ವೃತ್ತದಲ್ಲಿ ಕಸಾಪ ವತಿಯಿಂದ ನಿರ್ಮಿಸಿದ ವಿಶ್ವಮಾನವ ಸಂದೇಶ ಸಾರುವ ಕುವೆಂಪು ಪುತ್ಥಳಿಯನ್ನು ಶಾಸಕ ಕೆ.ಮಹದೇವ್ ಮತ್ತು ಗಣ್ಯರು ಅನಾವರಣಗೊಳಿಸಿದರು. ಮತ್ತು ಈ ವೃತ್ತ ಇಂದಿನಿಂದ ಕುವೆಂಪು ವೃತ್ತ ಎಂದು ನಾಮಕರಣ ಮಾಡಲಾಯಿತು. ಇದೇ ಸಂದರ್ಭದಲ್ಲಿ ರಸ್ತೆ ವೃತ್ತಗಳ ನಾಮಫಲಕ ಅನಾವರಣ ಮಾಡಲಾಯಿತು.</p>.<p>ಮೆರವಣಿಗೆಯಲ್ಲಿ ಸಮ್ಮೇಳನಾಧ್ಯಕ್ಷ ಟಿ.ಸಿ ವಸಂತರಾಜೇ ಅರಸ್ ಅವರನ್ನು ಕ್ಷೇತ್ರ ಧರ್ಮಸ್ಥಳ ಮಹಿಳಾ ಸಂಘ ಹಾಗೂ ವಿವಿಧ ಮಹಿಳಾ ಸಂಘಗಳ ವತಿಯಿಂದ ಪೂರ್ಣಕುಂಭ ಸ್ವಾಗಿಸಲಾಯಿತು. ತಾ.ಪಂ.ಅಧ್ಯಕ್ಷೆ ಕೆ.ಆರ್.ನಿರೂಪಾ ಸಮ್ಮೇಳನದ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ವಿವಿಧ ಕಲಾ ತಂಡಗಳ ವತಿಯಿಂದ ಪೂಜಾಕುಣಿತ, ವೀರಗಾಸೆ, ಡೊಳ್ಳುಕುಣಿತ, ಕೋಲಾಟ, ಕಂಸಾಳೆಗಳ ನೃತ್ಯ ಮೆರವಣಿಗೆಗೆ ಮೆರುಗು ನೀಡಿತ್ತು. ಸ್ಥಳೀಯ ಸರ್ಕಾರಿ ಮತ್ತು ಖಾಸಗಿ ಶಾಲೆಯ ಮಕ್ಕಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ರಂಗು ತಂದರು.</p>.<p>ಸಮ್ಮೇಳನದ ಅಂಗವಾಗಿ ಬೆಟ್ಟದಪುರ ಗ್ರಾಮವು ಮದುವಣಗಿತ್ತಿಯಂತೆ ಸಿಂಗರಿಸಿದ್ದ ಗ್ರಾಮಸ್ಥರು ಸಮ್ಮೇಳನಕ್ಕೆ ಸಹಕಾರ ನೀಡಿದ್ದರು.</p>.<p>ಇಲ್ಲಿನ ಅಕ್ಕಮಹಾದೇವಿ ಕ್ರೀಡಾಂಗಣದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರಧ್ವಜವನ್ನು ಶಾಸಕ ಕೆ.ಮಹದೇವ್, ನಾಡಧ್ವಜವನ್ನು ಗ್ರಾ.ಪಂ ಅಧ್ಯಕ್ಷೆ ಯಶೋಧಮ್ಮ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗೊರಳ್ಳಿ ಜಗದೀಶ್ ಧ್ವಜಾರೋಹಣ ನೆರವೇರಿಸಿದರು.</p>.<p>ಚನ್ನಬಸವ ದೇಶಿ ಕೇಂದ್ರ ಸ್ವಾಮೀಜಿ ಮಾತನಾಡಿ, ‘ಕನ್ನಡ ಮಠದಲ್ಲಿ ಅಕ್ಷರ ಜಾತ್ರೆಯು ತುಂಬ ಅಚ್ಚುಕಟ್ಟಾಗಿ ನಡೆಯುತ್ತಿದ್ದು, ಎಲ್ಲರ ಆಶಯದಂತೆ ಯಾವುದೇ ವಿಘ್ನವಿಲ್ಲದೇ ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ’ ಎಂದು ಶುಭ ಹಾರೈಸಿದರು.</p>.<p><strong>ವಸ್ತು ಪ್ರದರ್ಶನ:</strong> ಕೃಷಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಪುಸ್ತಕ ಮಾರಾಟ ಕೇಂದ್ರಗಳಿಂದ ವಸ್ತು ಪ್ರದರ್ಶನವನ್ನು ಶಾಸಕ ಕೆ. ಮಹದೇವ್ ಮತ್ತು ಗಣ್ಯರು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟದಪುರ: </strong>ಇಲ್ಲಿನ ಕೆಇಬಿ ವೃತ್ತದಲ್ಲಿ ಕಸಾಪ ವತಿಯಿಂದ ನಿರ್ಮಿಸಿದ ವಿಶ್ವಮಾನವ ಸಂದೇಶ ಸಾರುವ ಕುವೆಂಪು ಪುತ್ಥಳಿಯನ್ನು ಶಾಸಕ ಕೆ.ಮಹದೇವ್ ಮತ್ತು ಗಣ್ಯರು ಅನಾವರಣಗೊಳಿಸಿದರು. ಮತ್ತು ಈ ವೃತ್ತ ಇಂದಿನಿಂದ ಕುವೆಂಪು ವೃತ್ತ ಎಂದು ನಾಮಕರಣ ಮಾಡಲಾಯಿತು. ಇದೇ ಸಂದರ್ಭದಲ್ಲಿ ರಸ್ತೆ ವೃತ್ತಗಳ ನಾಮಫಲಕ ಅನಾವರಣ ಮಾಡಲಾಯಿತು.</p>.<p>ಮೆರವಣಿಗೆಯಲ್ಲಿ ಸಮ್ಮೇಳನಾಧ್ಯಕ್ಷ ಟಿ.ಸಿ ವಸಂತರಾಜೇ ಅರಸ್ ಅವರನ್ನು ಕ್ಷೇತ್ರ ಧರ್ಮಸ್ಥಳ ಮಹಿಳಾ ಸಂಘ ಹಾಗೂ ವಿವಿಧ ಮಹಿಳಾ ಸಂಘಗಳ ವತಿಯಿಂದ ಪೂರ್ಣಕುಂಭ ಸ್ವಾಗಿಸಲಾಯಿತು. ತಾ.ಪಂ.ಅಧ್ಯಕ್ಷೆ ಕೆ.ಆರ್.ನಿರೂಪಾ ಸಮ್ಮೇಳನದ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ವಿವಿಧ ಕಲಾ ತಂಡಗಳ ವತಿಯಿಂದ ಪೂಜಾಕುಣಿತ, ವೀರಗಾಸೆ, ಡೊಳ್ಳುಕುಣಿತ, ಕೋಲಾಟ, ಕಂಸಾಳೆಗಳ ನೃತ್ಯ ಮೆರವಣಿಗೆಗೆ ಮೆರುಗು ನೀಡಿತ್ತು. ಸ್ಥಳೀಯ ಸರ್ಕಾರಿ ಮತ್ತು ಖಾಸಗಿ ಶಾಲೆಯ ಮಕ್ಕಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ರಂಗು ತಂದರು.</p>.<p>ಸಮ್ಮೇಳನದ ಅಂಗವಾಗಿ ಬೆಟ್ಟದಪುರ ಗ್ರಾಮವು ಮದುವಣಗಿತ್ತಿಯಂತೆ ಸಿಂಗರಿಸಿದ್ದ ಗ್ರಾಮಸ್ಥರು ಸಮ್ಮೇಳನಕ್ಕೆ ಸಹಕಾರ ನೀಡಿದ್ದರು.</p>.<p>ಇಲ್ಲಿನ ಅಕ್ಕಮಹಾದೇವಿ ಕ್ರೀಡಾಂಗಣದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರಧ್ವಜವನ್ನು ಶಾಸಕ ಕೆ.ಮಹದೇವ್, ನಾಡಧ್ವಜವನ್ನು ಗ್ರಾ.ಪಂ ಅಧ್ಯಕ್ಷೆ ಯಶೋಧಮ್ಮ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗೊರಳ್ಳಿ ಜಗದೀಶ್ ಧ್ವಜಾರೋಹಣ ನೆರವೇರಿಸಿದರು.</p>.<p>ಚನ್ನಬಸವ ದೇಶಿ ಕೇಂದ್ರ ಸ್ವಾಮೀಜಿ ಮಾತನಾಡಿ, ‘ಕನ್ನಡ ಮಠದಲ್ಲಿ ಅಕ್ಷರ ಜಾತ್ರೆಯು ತುಂಬ ಅಚ್ಚುಕಟ್ಟಾಗಿ ನಡೆಯುತ್ತಿದ್ದು, ಎಲ್ಲರ ಆಶಯದಂತೆ ಯಾವುದೇ ವಿಘ್ನವಿಲ್ಲದೇ ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ’ ಎಂದು ಶುಭ ಹಾರೈಸಿದರು.</p>.<p><strong>ವಸ್ತು ಪ್ರದರ್ಶನ:</strong> ಕೃಷಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಪುಸ್ತಕ ಮಾರಾಟ ಕೇಂದ್ರಗಳಿಂದ ವಸ್ತು ಪ್ರದರ್ಶನವನ್ನು ಶಾಸಕ ಕೆ. ಮಹದೇವ್ ಮತ್ತು ಗಣ್ಯರು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>