ಮೈಸೂರು: ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹಲವೆಡೆ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದರು.
ಪುರಭವನದ ಆವರಣದಲ್ಲಿ ಬಹಿರಂಗ ಸಭೆ ನಡೆಯಿತು. ಕೆ ಎಸ್ ಆರ್ ಟಿ ಸಿ ನೌಕರರು ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ, ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಬ್ಯಾಂಕ್ ನೌಕರರು ನಜರ್ ಬಾದಿನ ಕೆನರಾ ಬ್ಯಾಂಕ್ ಮುಂಭಾಗ ಧರಣಿ ನಡೆಸಿದರು.
ಅಗ್ರಹಾರ, ಹೆಬ್ಬಾಳ, ವಿಜಯನಗರ, ಒಂಟಿಕೊಪ್ಪಲು, ರೈಲ್ವೆ ನಿಲ್ದಾಣದ ಸಮೀಪ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು.