ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಇದಕ್ಕೆ ಮೊದಲ ಕಾರಣ. ಕೋವಿಡ್ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಅವರ ನಡುವೆಯೇ ಸಮನ್ವಯತೆ ಕೊರತೆ ಇದೆ. ಆದ್ದರಿಂದ ಇಲ್ಲಿ ಅಧಿಕಾರಿಗಳು ಲಂಗು ಲಗಾಮಿಲ್ಲದೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.