<p><strong>ಮೈಸೂರು:</strong> ‘ಹಸುರತ್ತಲ್! ಹಸುರಿತ್ತಲ್ ! ಹಸುರೆತ್ತಲ್ ಕಡಲಿನಲಿ, ಹಸುರ್ಗಟ್ಟಿತೊ ಕವಿಯಾತ್ಮಂ ಹಸುರ್ನೆತ್ತರ್ ಒಡಲಿನಲಿ!’ ಕವಿ ಕುವೆಂಪು ಅವರ ಸಾಲುಗಳು ಸೋಮವಾರ ಇಲ್ಲಿನ ಚಾಮರಾಜೇಂದ್ರ ಮೃಗಾಲಯದ ಕಾರಂಜಿ ಕೆರೆಯಲ್ಲಿ ನಡೆದ ‘ಹಬ್ಬ’ದಲ್ಲಿ ನೆನಪಾಯಿತು.</p>.<p>ಹಸಿರನ್ನೇ ಹೊದ್ದುಕೊಂಡ ಕೆರೆಯಂಗಳದಲ್ಲಿ ಹಕ್ಕಿಗಳ ಕಲರವದ ಜತೆಗೆ ಚಿಣ್ಣರ ಕಲರವವೂ ಮಿಳಿತಗೊಂಡಿತ್ತು. ಚುರುಗುಟ್ಟುವ ಬಿಸಿಲಿಗೆ ಹಸಿರ ಚಪ್ಪರದ ಕೆಳಗೆ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳು ನಡೆದವು. ಬಾಗಿಲಿನಲ್ಲೇ ಬೃಹತ್ ರಂಗವಲ್ಲಿ ಕಣ್ಮನ ಸೆಳೆಯುತಿತ್ತು.</p>.<p>ಈ ಎಲ್ಲ ದೃಶ್ಯಗಳು ಇಲ್ಲಿ ಸೋಮವಾರ ನಡೆದ ಕಾರಂಜಿಕೆರೆ ಹಬ್ಬದಲ್ಲಿ ಕಂಡು ಬಂತು.</p>.<p>ರಸಪ್ರಶ್ನೆ ಕಾರ್ಯಕ್ರಮ, ಚಿತ್ರಕಲಾ ಸ್ಪರ್ಧೆಗಳಲ್ಲಿ ವಿವಿಧ ಶಾಲೆಗಳ 70ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೆರೆಯಂಗಳದ ಅಲ್ಲಲ್ಲಿ ಪರಿಸರ ಜಾಗೃತಿಗೆ ಸಂಬಂಧಿಸಿದಂತೆ ಬೀದಿ ನಾಟಕಗಳು ನಡೆದವು.</p>.<p>ಪ್ರಾದೇಶಿಕ ನೈಸರ್ಗಿಕ ಇತಿಹಾಸ ಪ್ರಾದೇಶಿಕ ನೈಸರ್ಗಿಕ ಇತಿಹಾಸ ವಸ್ತುಸಂಗ್ರಹಾಲಯದ ನಿರ್ದೇಶಕ ಇಂದ್ರೇಶ್ ಅವರು ಕವನ ವಾಚನ ಮಾಡುವ ಮೂಲಕ ಗಮನ ಸೆಳೆದರು.</p>.<p>‘ಕಾರಂಜಿ ಕೆರೆ ಹಬ್ಬ ಅತಿಶಯದ ಹಬ್ಬ’ ಎಂಬ ಅವರ ಕವನ ಗಮನ ಸೆಳೆಯಿತು. ಕಂಡಲ್ಲಿ ಕಸ ತೆಗೆದು ಕೆರೆಯನ್ನು ಸ್ವಚ್ಛವಾಗಿಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಮಾತನಾಡಿ, ‘ಕಾರಂಜಿ ಕೆರೆ ಉತ್ತಮ ಉದಾಹರಣೆಯಾಗಿದೆ. ಈ ರೀತಿ ಬೇರೆ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು’ ಎಂದು ಕರೆ ನೀಡಿದರು.</p>.<p>‘ಬೆಂಗಳೂರಿಗೆ 120 ಕಿ.ಮೀ.ನಿಂದ ನೀರನ್ನು ಪಂಪ್ ಮಾಡುವ ಮೂಲಕ ನಾವು ಪ್ರಕೃತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದೇವೆ. ಬದಲಿಗೆ, ಅಲ್ಲಿದ್ದ 600ರಿಂದ 800 ಕೆರೆಗಳನ್ನು ಉಳಿಸಿಕೊಂಡಿದ್ದರೆ, ಅಲ್ಲಿನ ಅಂತರ್ಜಲವೇ ನಮಗೆ ಸಾಕಾಗುತ್ತಿತ್ತು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಹಸುರತ್ತಲ್! ಹಸುರಿತ್ತಲ್ ! ಹಸುರೆತ್ತಲ್ ಕಡಲಿನಲಿ, ಹಸುರ್ಗಟ್ಟಿತೊ ಕವಿಯಾತ್ಮಂ ಹಸುರ್ನೆತ್ತರ್ ಒಡಲಿನಲಿ!’ ಕವಿ ಕುವೆಂಪು ಅವರ ಸಾಲುಗಳು ಸೋಮವಾರ ಇಲ್ಲಿನ ಚಾಮರಾಜೇಂದ್ರ ಮೃಗಾಲಯದ ಕಾರಂಜಿ ಕೆರೆಯಲ್ಲಿ ನಡೆದ ‘ಹಬ್ಬ’ದಲ್ಲಿ ನೆನಪಾಯಿತು.</p>.<p>ಹಸಿರನ್ನೇ ಹೊದ್ದುಕೊಂಡ ಕೆರೆಯಂಗಳದಲ್ಲಿ ಹಕ್ಕಿಗಳ ಕಲರವದ ಜತೆಗೆ ಚಿಣ್ಣರ ಕಲರವವೂ ಮಿಳಿತಗೊಂಡಿತ್ತು. ಚುರುಗುಟ್ಟುವ ಬಿಸಿಲಿಗೆ ಹಸಿರ ಚಪ್ಪರದ ಕೆಳಗೆ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳು ನಡೆದವು. ಬಾಗಿಲಿನಲ್ಲೇ ಬೃಹತ್ ರಂಗವಲ್ಲಿ ಕಣ್ಮನ ಸೆಳೆಯುತಿತ್ತು.</p>.<p>ಈ ಎಲ್ಲ ದೃಶ್ಯಗಳು ಇಲ್ಲಿ ಸೋಮವಾರ ನಡೆದ ಕಾರಂಜಿಕೆರೆ ಹಬ್ಬದಲ್ಲಿ ಕಂಡು ಬಂತು.</p>.<p>ರಸಪ್ರಶ್ನೆ ಕಾರ್ಯಕ್ರಮ, ಚಿತ್ರಕಲಾ ಸ್ಪರ್ಧೆಗಳಲ್ಲಿ ವಿವಿಧ ಶಾಲೆಗಳ 70ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೆರೆಯಂಗಳದ ಅಲ್ಲಲ್ಲಿ ಪರಿಸರ ಜಾಗೃತಿಗೆ ಸಂಬಂಧಿಸಿದಂತೆ ಬೀದಿ ನಾಟಕಗಳು ನಡೆದವು.</p>.<p>ಪ್ರಾದೇಶಿಕ ನೈಸರ್ಗಿಕ ಇತಿಹಾಸ ಪ್ರಾದೇಶಿಕ ನೈಸರ್ಗಿಕ ಇತಿಹಾಸ ವಸ್ತುಸಂಗ್ರಹಾಲಯದ ನಿರ್ದೇಶಕ ಇಂದ್ರೇಶ್ ಅವರು ಕವನ ವಾಚನ ಮಾಡುವ ಮೂಲಕ ಗಮನ ಸೆಳೆದರು.</p>.<p>‘ಕಾರಂಜಿ ಕೆರೆ ಹಬ್ಬ ಅತಿಶಯದ ಹಬ್ಬ’ ಎಂಬ ಅವರ ಕವನ ಗಮನ ಸೆಳೆಯಿತು. ಕಂಡಲ್ಲಿ ಕಸ ತೆಗೆದು ಕೆರೆಯನ್ನು ಸ್ವಚ್ಛವಾಗಿಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಮಾತನಾಡಿ, ‘ಕಾರಂಜಿ ಕೆರೆ ಉತ್ತಮ ಉದಾಹರಣೆಯಾಗಿದೆ. ಈ ರೀತಿ ಬೇರೆ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು’ ಎಂದು ಕರೆ ನೀಡಿದರು.</p>.<p>‘ಬೆಂಗಳೂರಿಗೆ 120 ಕಿ.ಮೀ.ನಿಂದ ನೀರನ್ನು ಪಂಪ್ ಮಾಡುವ ಮೂಲಕ ನಾವು ಪ್ರಕೃತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದೇವೆ. ಬದಲಿಗೆ, ಅಲ್ಲಿದ್ದ 600ರಿಂದ 800 ಕೆರೆಗಳನ್ನು ಉಳಿಸಿಕೊಂಡಿದ್ದರೆ, ಅಲ್ಲಿನ ಅಂತರ್ಜಲವೇ ನಮಗೆ ಸಾಕಾಗುತ್ತಿತ್ತು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>