<p><strong>ಮೈಸೂರು:</strong> ಇಲ್ಲಿನ ಬೋಗಾದಿಯ ನಿಂಗರಾಜಯ್ಯನಕಟ್ಟೆ ಏರಿಯನ್ನು ಒಡೆದು ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಬೋಗಾದಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕೆರೆ ಏರಿ ಒಡೆದು ಒಳಚರಂಡಿ ಪೈಪ್ಲೈನ್ ಅನ್ನು ಸಮೀಪದ ಬಡಾವಣೆಗೆ ಹಾಕಲಾಗಿದೆ. ಇದು ರಿಯಲ್ ಎಸ್ಟೇಟ್ ಉದ್ಯಮಿದಾರರ ಕೆಲಸ. ಇದರ ಹಿಂದೆ ಕೆರೆಯನ್ನೇ ಕಬಳಿಸುವ ಹುನ್ನಾರ ಅಡಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಈ ಕುರಿತು ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇವರಿಗೂ ಏರಿ ಒಡೆದಿರುವುದು ಗೊತ್ತಾಗಿದೆ. ಹೀಗಿದ್ದರೂ, ತಹಶೀಲ್ದಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಭಾರಿ ಮಳೆ ಬಂದು ಕೆರೆ ಭರ್ತಿಯಾದರೆ ನೀರು ಬೋಗಾದಿ ಗ್ರಾಮಕ್ಕೆ ನುಗ್ಗುವ ಅಪಾಯ ಇದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ ಆಗಸ್ಟ್ 14ರಂದು ಗ್ರಾಮಸ್ಥರು ಬೋಗಾದಿ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಕೈಗೊಂಡು, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ಅರುಣ್ಕುಮಾರ್ ಗೌಡ, ಎಂ.ನಾಗರಾಜು, ಕೆಂಚೇಗೌಡ, ಸ್ವಾಮಿ, ಶಂಕರ್, ಪುಟ್ಟೇಗೌಡ, ವೆಂಕಟೇಶ್ ಇದ್ದರು.</p>.<p class="Briefhead"><strong>ಮುಂದುವರಿದ ಅತಿಥಿ ಉಪನ್ಯಾಸಕರ ಪ್ರತಿಭಟನೆ</strong></p>.<p><strong>ಮೈಸೂರು: </strong>ಸೇವಾ ಭದ್ರತೆಗೆ ಒತ್ತಾಯಿಸಿ ಪ್ರತಿ ಮಂಗಳವಾರ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈ ಮಂಗಳವಾರ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು.</p>.<p>ಅತಿಥಿ ಉಪನ್ಯಾಸಕರಿಗೆ ಸಾಮೂಹಿಕ ನಿವೃತ್ತಿ ಘೋಷಿಸಿರುವುದು ಸ್ವಲ್ಪವೂ ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈಗಾಗಲೇ ಹರಿಯಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಲಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲೂ ಅನುಸರಿಸುವ ಮೂಲಕ ಅತಿಥಿ ಉಪನ್ಯಾಸಕರ ಹಿತಕಾಯಬೇಕು ಎಂದು ಆಗ್ರಹಿಸಿದರು.</p>.<p>ಲಾಕ್ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ಪೂರ್ಣ ಪ್ರಮಾಣದ ವೇತನ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಹದೇವಯ್ಯ, ಉಪಾಧ್ಯಕ್ಷ ಡಾ.ಸುಮಿತ್ರಾ, ಡಾ.ಎನ್.ಮಹೇಶ್, ನಾಗಾರ್ಜುನ್, ಪ್ರಧಾನ ಕಾರ್ಯದರ್ಶಿ ಹನುಮಂತೇಶ್, ಡಾ.ಕೆ.ಪ್ರಕಾಶ್, ಡಾ.ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಬೋಗಾದಿಯ ನಿಂಗರಾಜಯ್ಯನಕಟ್ಟೆ ಏರಿಯನ್ನು ಒಡೆದು ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಬೋಗಾದಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕೆರೆ ಏರಿ ಒಡೆದು ಒಳಚರಂಡಿ ಪೈಪ್ಲೈನ್ ಅನ್ನು ಸಮೀಪದ ಬಡಾವಣೆಗೆ ಹಾಕಲಾಗಿದೆ. ಇದು ರಿಯಲ್ ಎಸ್ಟೇಟ್ ಉದ್ಯಮಿದಾರರ ಕೆಲಸ. ಇದರ ಹಿಂದೆ ಕೆರೆಯನ್ನೇ ಕಬಳಿಸುವ ಹುನ್ನಾರ ಅಡಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಈ ಕುರಿತು ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇವರಿಗೂ ಏರಿ ಒಡೆದಿರುವುದು ಗೊತ್ತಾಗಿದೆ. ಹೀಗಿದ್ದರೂ, ತಹಶೀಲ್ದಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಭಾರಿ ಮಳೆ ಬಂದು ಕೆರೆ ಭರ್ತಿಯಾದರೆ ನೀರು ಬೋಗಾದಿ ಗ್ರಾಮಕ್ಕೆ ನುಗ್ಗುವ ಅಪಾಯ ಇದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ ಆಗಸ್ಟ್ 14ರಂದು ಗ್ರಾಮಸ್ಥರು ಬೋಗಾದಿ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಕೈಗೊಂಡು, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ಅರುಣ್ಕುಮಾರ್ ಗೌಡ, ಎಂ.ನಾಗರಾಜು, ಕೆಂಚೇಗೌಡ, ಸ್ವಾಮಿ, ಶಂಕರ್, ಪುಟ್ಟೇಗೌಡ, ವೆಂಕಟೇಶ್ ಇದ್ದರು.</p>.<p class="Briefhead"><strong>ಮುಂದುವರಿದ ಅತಿಥಿ ಉಪನ್ಯಾಸಕರ ಪ್ರತಿಭಟನೆ</strong></p>.<p><strong>ಮೈಸೂರು: </strong>ಸೇವಾ ಭದ್ರತೆಗೆ ಒತ್ತಾಯಿಸಿ ಪ್ರತಿ ಮಂಗಳವಾರ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈ ಮಂಗಳವಾರ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು.</p>.<p>ಅತಿಥಿ ಉಪನ್ಯಾಸಕರಿಗೆ ಸಾಮೂಹಿಕ ನಿವೃತ್ತಿ ಘೋಷಿಸಿರುವುದು ಸ್ವಲ್ಪವೂ ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈಗಾಗಲೇ ಹರಿಯಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಲಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲೂ ಅನುಸರಿಸುವ ಮೂಲಕ ಅತಿಥಿ ಉಪನ್ಯಾಸಕರ ಹಿತಕಾಯಬೇಕು ಎಂದು ಆಗ್ರಹಿಸಿದರು.</p>.<p>ಲಾಕ್ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ಪೂರ್ಣ ಪ್ರಮಾಣದ ವೇತನ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಹದೇವಯ್ಯ, ಉಪಾಧ್ಯಕ್ಷ ಡಾ.ಸುಮಿತ್ರಾ, ಡಾ.ಎನ್.ಮಹೇಶ್, ನಾಗಾರ್ಜುನ್, ಪ್ರಧಾನ ಕಾರ್ಯದರ್ಶಿ ಹನುಮಂತೇಶ್, ಡಾ.ಕೆ.ಪ್ರಕಾಶ್, ಡಾ.ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>