<p>ಮೈಸೂರು: ತನ್ನ ಒಡೆತನದ ₹ 8 ಕೋಟಿ ಮೌಲ್ಯದ 1.20 ಎಕರೆ ಭೂಮಿಯ ಒತ್ತುವರಿಯನ್ನು ತೆರವುಗೊಳಿಸಿದ ಮುಡಾ, ಅನಧಿಕೃತ ಬಡಾವಣೆ ನಿರ್ಮಾಣಕ್ಕೆ ತಡೆ ಹಾಕಿ, ಜಮೀನನ್ನು ತನ್ನ ಸ್ವಾಧೀನಕ್ಕೆ ಮರು ವಶಪಡಿಸಿಕೊಂಡಿದೆ.</p>.<p>ಒತ್ತುವರಿದಾರರು ಸರ್ಕಾರದ ಆಸ್ತಿಗಳನ್ನು ನಾಶಪಡಿಸಿ ಹಾಗೂ ನಷ್ಟ ಉಂಟು ಮಾಡಿರುವುದರಿಂದ, ಈ ಅನಧಿಕೃತ ಒತ್ತುವರಿದಾರರ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿದೆ.</p>.<p>ದೇವನೂರು ಗ್ರಾಮದ ಸರ್ವೆ ನಂಬರ್ 26, 27, 28/1ಎ, 2/1 ಬಿ1, 28/1 ಬಿ1, 23/2, 29/1, 291 ಬಿ ಮತ್ತು 29/2ರ 7.31 ಎಕರೆ ಜಮೀನನ್ನು ಪ್ರಾಧಿಕಾರವು ಪರಸ್ಪರ ಒಪ್ಪಂದದ ಮೂಲಕ ಭೂಸ್ವಾಧೀನ ಪಡಿಸಿಕೊಂಡು, ಸಂಬಂಧಪಟ್ಟ ಭೂ ಮಾಲೀಕರಿಗೆ ಪರಿಹಾರ ಪಾವತಿಸಿದೆ. ಈ ಜಮೀನುಗಳ ಭೂ ಪ್ರದೇಶವನ್ನು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ನಿರ್ಮಾಣ ಮಾಡಲು ಕಾಯ್ದಿರಿಸಿದೆ.</p>.<p>ಈ ಕಾಯ್ದಿರಿಸಿದ ಭೂಮಿಯಲ್ಲೇ ಒತ್ತುವರಿದಾರರು 1.20 ಎಕರೆ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡಿದ್ದರು.</p>.<p>ಪ್ರಾಧಿಕಾರದ ಅಧೀಕ್ಷಕ ಎಂಜಿನಿಯರ್ ಶಂಕರ್, ಕಾರ್ಯಪಾಲಕ ಎಂಜಿನಿಯರ್ ಸುವರ್ಣಾ ಸ್ಥಳಕ್ಕೆ ಭೇಟಿ ನೀಡಿ, ಒತ್ತುವರಿದಾರರ ಹಾಜರಿಯಲ್ಲೇ ಸ್ವತ್ತುಗಳನ್ನು ವಶಕ್ಕೆ ಪಡೆದು, ಪ್ರಾಧಿಕಾರದ ಆಸ್ತಿ ಎಂದು ನಾಮಫಲಕ ಅಳವಡಿಸಿದ್ದಾರೆ. ವಲಯ ಅಧಿಕಾರಿ ಜಿ.ಮೋಹನ್, ಸಹಾಯಕ ಎಂಜಿನಿಯರ್ ರಾಜಶೇಖರ್ ಜೊತೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ತನ್ನ ಒಡೆತನದ ₹ 8 ಕೋಟಿ ಮೌಲ್ಯದ 1.20 ಎಕರೆ ಭೂಮಿಯ ಒತ್ತುವರಿಯನ್ನು ತೆರವುಗೊಳಿಸಿದ ಮುಡಾ, ಅನಧಿಕೃತ ಬಡಾವಣೆ ನಿರ್ಮಾಣಕ್ಕೆ ತಡೆ ಹಾಕಿ, ಜಮೀನನ್ನು ತನ್ನ ಸ್ವಾಧೀನಕ್ಕೆ ಮರು ವಶಪಡಿಸಿಕೊಂಡಿದೆ.</p>.<p>ಒತ್ತುವರಿದಾರರು ಸರ್ಕಾರದ ಆಸ್ತಿಗಳನ್ನು ನಾಶಪಡಿಸಿ ಹಾಗೂ ನಷ್ಟ ಉಂಟು ಮಾಡಿರುವುದರಿಂದ, ಈ ಅನಧಿಕೃತ ಒತ್ತುವರಿದಾರರ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿದೆ.</p>.<p>ದೇವನೂರು ಗ್ರಾಮದ ಸರ್ವೆ ನಂಬರ್ 26, 27, 28/1ಎ, 2/1 ಬಿ1, 28/1 ಬಿ1, 23/2, 29/1, 291 ಬಿ ಮತ್ತು 29/2ರ 7.31 ಎಕರೆ ಜಮೀನನ್ನು ಪ್ರಾಧಿಕಾರವು ಪರಸ್ಪರ ಒಪ್ಪಂದದ ಮೂಲಕ ಭೂಸ್ವಾಧೀನ ಪಡಿಸಿಕೊಂಡು, ಸಂಬಂಧಪಟ್ಟ ಭೂ ಮಾಲೀಕರಿಗೆ ಪರಿಹಾರ ಪಾವತಿಸಿದೆ. ಈ ಜಮೀನುಗಳ ಭೂ ಪ್ರದೇಶವನ್ನು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ನಿರ್ಮಾಣ ಮಾಡಲು ಕಾಯ್ದಿರಿಸಿದೆ.</p>.<p>ಈ ಕಾಯ್ದಿರಿಸಿದ ಭೂಮಿಯಲ್ಲೇ ಒತ್ತುವರಿದಾರರು 1.20 ಎಕರೆ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡಿದ್ದರು.</p>.<p>ಪ್ರಾಧಿಕಾರದ ಅಧೀಕ್ಷಕ ಎಂಜಿನಿಯರ್ ಶಂಕರ್, ಕಾರ್ಯಪಾಲಕ ಎಂಜಿನಿಯರ್ ಸುವರ್ಣಾ ಸ್ಥಳಕ್ಕೆ ಭೇಟಿ ನೀಡಿ, ಒತ್ತುವರಿದಾರರ ಹಾಜರಿಯಲ್ಲೇ ಸ್ವತ್ತುಗಳನ್ನು ವಶಕ್ಕೆ ಪಡೆದು, ಪ್ರಾಧಿಕಾರದ ಆಸ್ತಿ ಎಂದು ನಾಮಫಲಕ ಅಳವಡಿಸಿದ್ದಾರೆ. ವಲಯ ಅಧಿಕಾರಿ ಜಿ.ಮೋಹನ್, ಸಹಾಯಕ ಎಂಜಿನಿಯರ್ ರಾಜಶೇಖರ್ ಜೊತೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>