'ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿ ಜಾರಿಗೆ ಬಂದ ಯಶಸ್ವಿನಿ ಯೋಜನೆ ಸ್ಥಗಿತಗೊಂಡಿದ್ದು,
ಹಣಕಾಸು ಪರಿಸ್ಥಿತಿ ಸುಧಾರಣೆಯಾದರೆ ಮತ್ತೆ ಚಾಲನೆಗೊಳಿಸಲಾಗುವುದು. ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿಯೇ ಜಾರಿಗೊಳಿಸಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರಲು ಉತ್ತೇಜನ ನೀಡಲಾಯಿತು. ಐಟಿ, ಬಿಟಿ ಉದ್ಯಮ ಕ್ಷೇತ್ರದಲ್ಲೂ ಅವರ ಹೆಜ್ಜೆ ಗುರುತುಗಳಿವೆ' ಎಂದು ಹೇಳಿದರು.