<p><strong>ಮೈಸೂರು:</strong> ಕಾನೂನು ಮತ್ತು ಸುವ್ಯವಸ್ಥೆ ಮೈಸೂರಿನಲ್ಲಿ ಸಂಪೂರ್ಣ ಕುಸಿದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.</p>.<p>ಕೊಲೆ, ಸುಲಿಗೆ, ಕಳ್ಳತನ, ದರೋಡೆ, ಅತ್ಯಾಚಾರಗಳಂತಹ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಅದರಲ್ಲೂ ಸಾಮೂಹಿಕ ಅತ್ಯಾಚಾರದಂತಹ ಹೇಯ ಕೃತ್ಯ ನಡೆದು, ಮೈಸೂರಿಗೆ ಕಪ್ಪು ಚುಕ್ಕೆ ಬಂದಿದೆ. ಹೀಗಿದ್ದರೂ, ಸರ್ಕಾರ ಪೊಲೀಸರಿಗೆ ಚಾಟಿ ಬೀಸದೇ ಬೆನ್ನು ತಟ್ಟುತ್ತಿದೆ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಒಂದು ವೇಳೆ ಸರ್ಕಾರ ಎಚ್ಚೆತ್ತುಕೊಳ್ಳದೇ ಇದ್ದಲ್ಲಿ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುವುದು ನಿಶ್ಚಿತ. ವಿವಿಧ ತನಿಖಾ ಸಂಸ್ಥೆಗಳಿಂದ ಉನ್ನತ ಮಟ್ಟದ ತನಿಖೆ ನಡೆಸಲು ಆಗ್ರಹಿಸುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಶಾಸಕ ಜಿ.ಟಿ.ದೇವೇಗೌಡ ಹಾಗೂ ಅವರ ಪುತ್ರ ಇಬ್ಬರಿಗೂ ಟಿಕೆಟ್ ನೀಡುತ್ತೇವೆ ಎಂದು ಹೇಳಿಲ್ಲ. ಟಿಕೆಟ್ ವಿಷಯವನ್ನು ಹೈಕಮಾಂಡ್ನ್ನು ಕೇಳುವಂತೆ ಹೇಳಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ ಅಡುಗೆ ಅನಿಲದ ದರವು ₹ 414 ಇತ್ತು. ಈಗ ₹ 886ಕ್ಕೆ ಹೆಚ್ಚಿದೆ. ಪ್ರಧಾನಿ ಮೋದಿ ಅವರು ಹೇಳಿದ ಅಚ್ಚೇ ದಿನ್ ಇದೆ ಎಂದು ವ್ಯಂಗ್ಯವಾಡಿದರು.</p>.<p>‘ಜಾತಿಗಣತಿ ವರದಿ ನಾನು ಮುಖ್ಯಮಂತ್ರಿಯಾಗಿದ್ದಾಗ ರೂಪುಗೊಂಡಿರಲೇ ಇಲ್ಲ. ಹಾಗಾಗಿ, ಅದನ್ನು ಬಿಡುಗಡೆ ಮಾಡಲಿಲ್ಲ ಎಂಬ ಹಾಗೂ ಅದನ್ನು ಸೋರಿಕೆ ಮಾಡಿದೆ ಎಂಬ ಆರೋಪಗಳು ಬಾಲಿಶವಾದದ್ದು’ ಎಂದರು.</p>.<p>ಶಾಸಕ ತನ್ವೀರ್ ಸೇಠ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕೆಪಿಸಿಸಿ ವಕ್ತರರಾದ ಎಂ.ಲಕ್ಷ್ಮಣ್, ಎಚ್.ಎ.ವೆಂಕಟೇಶ್, ನಗರಾಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಡಾ.ಎಚ್.ಸಿ.ಮಹದೇವಪ್ಪ, ಎಂ.ಕೆ.ಸೋಮಶೇಖರ್ ಇದ್ದರು.</p>.<p><strong>ಪೊಲೀಸರಿಗೆ ತರಾಟೆ:</strong> ಸಿದ್ದರಾಮಯ್ಯ ಅವರು ಇಲ್ಲಿನ ಜಲದರ್ಶಿನಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು.</p>.<p>ಈ ವೇಳೆ ಅವರು ಹೆಚ್ಚುತ್ತಿರುವ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.</p>.<p>ಆರೋಪಿಗಳನ್ನು ಬಂಧಿಸುವುದು ದೊಡ್ಡದ್ದಲ್ಲ. ಅಪರಾಧಗಳು ನಡೆಯದಂತೆ ಎಚ್ಚರವಹಿಸುವುದು ದೊಡ್ಡದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕಾನೂನು ಮತ್ತು ಸುವ್ಯವಸ್ಥೆ ಮೈಸೂರಿನಲ್ಲಿ ಸಂಪೂರ್ಣ ಕುಸಿದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.</p>.<p>ಕೊಲೆ, ಸುಲಿಗೆ, ಕಳ್ಳತನ, ದರೋಡೆ, ಅತ್ಯಾಚಾರಗಳಂತಹ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಅದರಲ್ಲೂ ಸಾಮೂಹಿಕ ಅತ್ಯಾಚಾರದಂತಹ ಹೇಯ ಕೃತ್ಯ ನಡೆದು, ಮೈಸೂರಿಗೆ ಕಪ್ಪು ಚುಕ್ಕೆ ಬಂದಿದೆ. ಹೀಗಿದ್ದರೂ, ಸರ್ಕಾರ ಪೊಲೀಸರಿಗೆ ಚಾಟಿ ಬೀಸದೇ ಬೆನ್ನು ತಟ್ಟುತ್ತಿದೆ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಒಂದು ವೇಳೆ ಸರ್ಕಾರ ಎಚ್ಚೆತ್ತುಕೊಳ್ಳದೇ ಇದ್ದಲ್ಲಿ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುವುದು ನಿಶ್ಚಿತ. ವಿವಿಧ ತನಿಖಾ ಸಂಸ್ಥೆಗಳಿಂದ ಉನ್ನತ ಮಟ್ಟದ ತನಿಖೆ ನಡೆಸಲು ಆಗ್ರಹಿಸುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಶಾಸಕ ಜಿ.ಟಿ.ದೇವೇಗೌಡ ಹಾಗೂ ಅವರ ಪುತ್ರ ಇಬ್ಬರಿಗೂ ಟಿಕೆಟ್ ನೀಡುತ್ತೇವೆ ಎಂದು ಹೇಳಿಲ್ಲ. ಟಿಕೆಟ್ ವಿಷಯವನ್ನು ಹೈಕಮಾಂಡ್ನ್ನು ಕೇಳುವಂತೆ ಹೇಳಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ ಅಡುಗೆ ಅನಿಲದ ದರವು ₹ 414 ಇತ್ತು. ಈಗ ₹ 886ಕ್ಕೆ ಹೆಚ್ಚಿದೆ. ಪ್ರಧಾನಿ ಮೋದಿ ಅವರು ಹೇಳಿದ ಅಚ್ಚೇ ದಿನ್ ಇದೆ ಎಂದು ವ್ಯಂಗ್ಯವಾಡಿದರು.</p>.<p>‘ಜಾತಿಗಣತಿ ವರದಿ ನಾನು ಮುಖ್ಯಮಂತ್ರಿಯಾಗಿದ್ದಾಗ ರೂಪುಗೊಂಡಿರಲೇ ಇಲ್ಲ. ಹಾಗಾಗಿ, ಅದನ್ನು ಬಿಡುಗಡೆ ಮಾಡಲಿಲ್ಲ ಎಂಬ ಹಾಗೂ ಅದನ್ನು ಸೋರಿಕೆ ಮಾಡಿದೆ ಎಂಬ ಆರೋಪಗಳು ಬಾಲಿಶವಾದದ್ದು’ ಎಂದರು.</p>.<p>ಶಾಸಕ ತನ್ವೀರ್ ಸೇಠ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕೆಪಿಸಿಸಿ ವಕ್ತರರಾದ ಎಂ.ಲಕ್ಷ್ಮಣ್, ಎಚ್.ಎ.ವೆಂಕಟೇಶ್, ನಗರಾಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಡಾ.ಎಚ್.ಸಿ.ಮಹದೇವಪ್ಪ, ಎಂ.ಕೆ.ಸೋಮಶೇಖರ್ ಇದ್ದರು.</p>.<p><strong>ಪೊಲೀಸರಿಗೆ ತರಾಟೆ:</strong> ಸಿದ್ದರಾಮಯ್ಯ ಅವರು ಇಲ್ಲಿನ ಜಲದರ್ಶಿನಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು.</p>.<p>ಈ ವೇಳೆ ಅವರು ಹೆಚ್ಚುತ್ತಿರುವ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.</p>.<p>ಆರೋಪಿಗಳನ್ನು ಬಂಧಿಸುವುದು ದೊಡ್ಡದ್ದಲ್ಲ. ಅಪರಾಧಗಳು ನಡೆಯದಂತೆ ಎಚ್ಚರವಹಿಸುವುದು ದೊಡ್ಡದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>