ನಂತರ, ಮನೆಯ ಬಾಗಿಲು ಹಾಕಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿದರು. ಇದರ ಕುತ್ತಿಗೆಯಲ್ಲಿ ಬಿಗಿದಿದ್ದ ಉರುಳನ್ನು ತೆಗೆದರು. ಒಂದೆರಡು ಗಂಟೆ ಕಳೆದಿದ್ದರೆ ಚಿರತೆಯು ಮೃತಪಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.