ಮೈಸೂರು: ನಗರದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಆವರಣದಲ್ಲಿ ಕಾಣಿಸಿಕೊಂಡು ಭೀತಿ ಹುಟ್ಟಿಸಿದ್ದ ಚಿರತೆಯೊಂದು ಬುಧವಾರ ರಾತ್ರಿ ಬೋನಿಗೆ ಬಿದ್ದಿದೆ.
ಅರಣ್ಯ ಇಲಾಖೆಯು ಮೂರು ದಿನಗಳ ಹಿಂದಷ್ಟೇ ಬೋನನ್ನು ಇರಿಸಿತ್ತು. ಗುರುವಾರ ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
'ಸುಮಾರು 6 ವರ್ಷದ ಗಂಡು ಚಿರತೆಯಾಗಿದ್ದು, ಬೆಮೆಲ್ ಆವರಣದ ಕುರುಚಲು ಕಾಡಿನಲ್ಲಿ ಅಡಗಿತ್ತು. ಇದೀಗ ಮೇಲಧಿಕಾರಿಗಳ ಅನುಮತಿ ಪಡೆದು ಬಿಳಿಗಿರಿರಂಗನಬೆಟ್ಟದ ಕೆ.ಗುಡಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ' ಎಂದು ಎಸಿಎಫ್ ಲಕ್ಷ್ಮಿಕಾಂತ್ 'ಪ್ರಜಾವಾಣಿ'ಗೆ ತಿಳಿಸಿದರು.