ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು ಕಟಾವಿನ ವೇಳೆ ಮೂರು ಚಿರತೆ ಮರಿ ಪತ್ತೆ 

Last Updated 3 ಮಾರ್ಚ್ 2020, 14:12 IST
ಅಕ್ಷರ ಗಾತ್ರ

ತಿ.ನರಸೀಪುರ: ತಾಲ್ಲೂಕಿನ ತುಂಬಲ ಗ್ರಾಮದ ಜಮೀನೊಂದರಲ್ಲಿ ಮಂಗಳವಾರ ಕಬ್ಬು ಕಟಾವಿನ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.

ಗ್ರಾಮದ ಇರ್ಷಾದ್ ಎಂಬುವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಈ ಮೂರು ಮರಿಗಳು ಸಿಕ್ಕಿದ್ದು, ಮೂರ್ನಾಲ್ಕು ದಿನದ ಹಿಂದಷ್ಟೇ ಜನಿಸಿರಬಹುದು ಎನ್ನಲಾಗಿದೆ.

ಅರಣ್ಯ ಇಲಾಖೆಗೆ ಮಾಹಿತಿ ದೊರೆತ ತಕ್ಷಣವೇ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT