‘ರಾಜ್ಯ ಸರ್ಕಾರದ ವಿರುದ್ಧ ಶೇ 40 ಕಮಿಷನ್ ಆರೋಪ ಮಾಡಿರುವುದು ನಾನಲ್ಲ. ಗುತ್ತಿಗೆದಾರರ ಸಂಘ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದೆ. ಈ ವಿಚಾರ ಮೊದಲು ಪ್ರಜಾವಾಣಿ ಹಾಗೂ ಡೆಕ್ಕನ್ ಹೆರಾಲ್ಡ್ನಲ್ಲಿ ಪ್ರಕಟವಾಗಿದೆ. ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರಿಕಾಗೋಷ್ಠಿ ಕೂಡ ನಡೆಸಿ ವಿಚಾರ ತಿಳಿಸಿದ್ದಾರೆ. ಈ ಹೇಳಿಕೆ ಆಧರಿಸಿ ನಾನು ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇನೆ. ಮೋದಿ ಪ್ರಾಮಾಣಿಕರಾಗಿದ್ದರೆ ರಾಜ್ಯ ಸರ್ಕಾರವನ್ನು ವಜಾ ಮಾಡಲಿ’ ಎಂದು ಆಗ್ರಹಿಸಿದರು.