<p><strong>ಮೈಸೂರು:</strong> ರಾಜ್ಯ ಸರ್ಕಾರದ ಆದೇಶದಂತೆ ಮೈಸೂರಿನಲ್ಲೂ ಮೇ 24ರ ಭಾನುವಾರ ಲಾಕ್ಡೌನ್ ಅನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಅಗತ್ಯ ಸೇವೆ, ವಸ್ತುಗಳ ಪೂರೈಕೆ, ವೈದ್ಯಕೀಯ ಸೇವೆ ಹೊರತುಪಡಿಸಿ, ಇನ್ನುಳಿದ ಸಾರ್ವಜನಿಕರ ಸಂಚಾರ, ವ್ಯಾಪಾರ ವಹಿವಾಟನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗೆ ಎಂದಿನಂತೆ ಅವಕಾಶ ಇರಲಿದೆ. ಅನಗತ್ಯವಾಗಿ ಹೊರಗಡೆ ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>‘ಹಾಲು, ಹಣ್ಣು, ತರಕಾರಿ, ದಿನಸಿ, ಮೊಟ್ಟೆ–ಮಾಂಸ ಮಾರಾಟಕ್ಕೆ ಅವಕಾಶವಿದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ತೆರೆದಿರಲಿವೆ. ವೈದ್ಯರು, ದಾದಿಯರು, ಆಂಬುಲೆನ್ಸ್ ಓಡಾಟಕ್ಕೆ ಅವಕಾಶವಿದೆ. ರೋಗಿಗಳು ತಪಾಸಣೆಗಾಗಿ ಆಸ್ಪತ್ರೆಗೆ ಹೋಗಬಹುದು. ಮೊದಲೇ ನಿಗದಿಯಾಗಿದ್ದರೆ ಷರತ್ತುಗೊಳಪಟ್ಟು ಮದುವೆಗೆ ಅವಕಾಶವಿದೆ‘ ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>’ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧವಿರಲಿದೆ. ವಾಣಿಜ್ಯ ಮಳಿಗೆಗಳು, ಪ್ರಮುಖ ರಸ್ತೆಗಳು ಬಂದ್ ಆಗಲಿವೆ. ಬಾರ್, ಸಲೂನ್, ಪಾರ್ಕ್ ತೆರೆದಿರಲ್ಲ. ಆಟೊ, ಟ್ಯಾಕ್ಸಿ/ಕ್ಯಾಬ್ ಸೇವೆ ಸಹ ಇರಲ್ಲ. ತುರ್ತು ಅಗತ್ಯಗಳಿಗೆ ಬಿಟ್ಟು ಬೇರೆ ಕೆಲಸಕ್ಕೆ ಖಾಸಗಿ ವಾಹನ ಬಳಸುವಂತಿಲ್ಲ‘ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜ್ಯ ಸರ್ಕಾರದ ಆದೇಶದಂತೆ ಮೈಸೂರಿನಲ್ಲೂ ಮೇ 24ರ ಭಾನುವಾರ ಲಾಕ್ಡೌನ್ ಅನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಅಗತ್ಯ ಸೇವೆ, ವಸ್ತುಗಳ ಪೂರೈಕೆ, ವೈದ್ಯಕೀಯ ಸೇವೆ ಹೊರತುಪಡಿಸಿ, ಇನ್ನುಳಿದ ಸಾರ್ವಜನಿಕರ ಸಂಚಾರ, ವ್ಯಾಪಾರ ವಹಿವಾಟನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗೆ ಎಂದಿನಂತೆ ಅವಕಾಶ ಇರಲಿದೆ. ಅನಗತ್ಯವಾಗಿ ಹೊರಗಡೆ ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>‘ಹಾಲು, ಹಣ್ಣು, ತರಕಾರಿ, ದಿನಸಿ, ಮೊಟ್ಟೆ–ಮಾಂಸ ಮಾರಾಟಕ್ಕೆ ಅವಕಾಶವಿದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ತೆರೆದಿರಲಿವೆ. ವೈದ್ಯರು, ದಾದಿಯರು, ಆಂಬುಲೆನ್ಸ್ ಓಡಾಟಕ್ಕೆ ಅವಕಾಶವಿದೆ. ರೋಗಿಗಳು ತಪಾಸಣೆಗಾಗಿ ಆಸ್ಪತ್ರೆಗೆ ಹೋಗಬಹುದು. ಮೊದಲೇ ನಿಗದಿಯಾಗಿದ್ದರೆ ಷರತ್ತುಗೊಳಪಟ್ಟು ಮದುವೆಗೆ ಅವಕಾಶವಿದೆ‘ ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>’ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧವಿರಲಿದೆ. ವಾಣಿಜ್ಯ ಮಳಿಗೆಗಳು, ಪ್ರಮುಖ ರಸ್ತೆಗಳು ಬಂದ್ ಆಗಲಿವೆ. ಬಾರ್, ಸಲೂನ್, ಪಾರ್ಕ್ ತೆರೆದಿರಲ್ಲ. ಆಟೊ, ಟ್ಯಾಕ್ಸಿ/ಕ್ಯಾಬ್ ಸೇವೆ ಸಹ ಇರಲ್ಲ. ತುರ್ತು ಅಗತ್ಯಗಳಿಗೆ ಬಿಟ್ಟು ಬೇರೆ ಕೆಲಸಕ್ಕೆ ಖಾಸಗಿ ವಾಹನ ಬಳಸುವಂತಿಲ್ಲ‘ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>