‘ಹಾಲು, ಹಣ್ಣು, ತರಕಾರಿ, ದಿನಸಿ, ಮೊಟ್ಟೆ–ಮಾಂಸ ಮಾರಾಟಕ್ಕೆ ಅವಕಾಶವಿದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ತೆರೆದಿರಲಿವೆ. ವೈದ್ಯರು, ದಾದಿಯರು, ಆಂಬುಲೆನ್ಸ್ ಓಡಾಟಕ್ಕೆ ಅವಕಾಶವಿದೆ. ರೋಗಿಗಳು ತಪಾಸಣೆಗಾಗಿ ಆಸ್ಪತ್ರೆಗೆ ಹೋಗಬಹುದು. ಮೊದಲೇ ನಿಗದಿಯಾಗಿದ್ದರೆ ಷರತ್ತುಗೊಳಪಟ್ಟು ಮದುವೆಗೆ ಅವಕಾಶವಿದೆ‘ ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.