ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ಲಾಕ್ಡೌನ್ ಜಾರಿಯಾಗಿದ್ದರೂ ಮಹದೇವಪುರ ಮುಖ್ಯರಸ್ತೆಯಲ್ಲಿರುವ ಅಜೀಜ್ ಸೇಠ್ ಯಾದ್ಗಾರ್ ಹೋಟೆಲ್ನಲ್ಲಿ ಗ್ರಾಹಕರಿಗೆ ಪಾರ್ಸೆಲ್ ನೀಡುವ ಬದಲು ಆಹಾರ ಸೇವಿಸಲು ಅವಕಾಶ ಮಾಡಿಕೊಡಲಾಗಿತ್ತು. ಹೀಗಾಗಿ, ಹೋಟೆಲ್ನ ಮುಜಾಹಿದ್ ಪಾಷಾ ಎಂಬುವವರ ಮೇಲೆ ಐಪಿಸಿ ಸೆಕ್ಷನ್ 188ರ ಅನ್ವಯ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.