<p><strong>ಬಾಗಲಕೋಟೆ: </strong>ಬಸವ ಜಯಂತಿ ಅಂಗವಾಗಿ ಬುಧವಾರ ಕೂಡಲಸಂಗಮ ಕ್ಷೇತ್ರದ ಬಸವಣ್ಣನ ಐಕ್ಯ ಸ್ಥಳಕ್ಕೆ ಸಚಿವ ಎಂ.ಬಿ. ಪಾಟೀಲ ಅವರು ಭೇಟಿ ನೀಡಿದರು.</p>.<p>ಕುಟುಂಬ ಸಮೇತರಾಗಿ ಬಂದಿದ್ದ ಎಂ.ಬಿ. ಪಾಟೀಲ, ಬಸವಣ್ಣನ ಐಕ್ಯ ಸ್ಥಳದಲ್ಲಿ 20 ನಿಮಿಷ ಧ್ಯಾನಕ್ಕೆ ಮೊರೆ ಹೋದರು.</p>.<p>ಬಳಿಕ ಕ್ಷೇತ್ರಾಧಿಪತಿ ಸಂಗಮನಾಥ, ಗಣೇಶ ದೇವಸ್ಥಾನ, ಜಾತವೇದ ಮುನಿಗಳ ಗದ್ದುಗೆಗೆ ಭೇಟಿ ನೀಡಿದರು.</p>.<p>ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಬಸವ ಜಯಂತಿ ಅಂಗವಾಗಿ ಬುಧವಾರ ಕೂಡಲಸಂಗಮ ಕ್ಷೇತ್ರದ ಬಸವಣ್ಣನ ಐಕ್ಯ ಸ್ಥಳಕ್ಕೆ ಸಚಿವ ಎಂ.ಬಿ. ಪಾಟೀಲ ಅವರು ಭೇಟಿ ನೀಡಿದರು.</p>.<p>ಕುಟುಂಬ ಸಮೇತರಾಗಿ ಬಂದಿದ್ದ ಎಂ.ಬಿ. ಪಾಟೀಲ, ಬಸವಣ್ಣನ ಐಕ್ಯ ಸ್ಥಳದಲ್ಲಿ 20 ನಿಮಿಷ ಧ್ಯಾನಕ್ಕೆ ಮೊರೆ ಹೋದರು.</p>.<p>ಬಳಿಕ ಕ್ಷೇತ್ರಾಧಿಪತಿ ಸಂಗಮನಾಥ, ಗಣೇಶ ದೇವಸ್ಥಾನ, ಜಾತವೇದ ಮುನಿಗಳ ಗದ್ದುಗೆಗೆ ಭೇಟಿ ನೀಡಿದರು.</p>.<p>ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>