ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇಮಿಗಳ ದಿನಾಚರಣೆಗೆ ಮುನ್ನವೇ ಆತ್ಮಹತ್ಯೆಗೆ ಶರಣಾದ ಯುವತಿ

Last Updated 13 ಫೆಬ್ರುವರಿ 2020, 6:36 IST
ಅಕ್ಷರ ಗಾತ್ರ

ಮೈಸೂರು: ಪ್ರಿಯಕರನ ಕಿರುಕುಳಕ್ಕೆ ಬೇಸತ್ತ ಪ್ರಿಯತಮೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೇಘನಾ(೨೦) ಮೃತ ದುರ್ದೈವಿ,ಪ್ರಿಯತಮ ಮಣಿಕಂಠಕೆಲವು ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರದ್ದೂ ಬೇರೆಬೇರೆ ಜಾತಿ ಹಿನ್ನೆಲೆಯುಳ್ಳವರು ಎನ್ನಲಾಗಿದೆ. ಇಬ್ಬರೂ ಮದುವೆಯಾಗುವುದಾಗಿ ಹೇಳಿದಾಗ ಕುಟುಂಬದವರು ಒಪ್ಪದೆ,ಮದುವೆಗೆ ವಿರೋಧ ವ್ಯಕ್ತವಾಗಿತ್ತು ಎಂದು ಗೊತ್ತಾಗಿದೆ.

ಇಬ್ಬರಿಗೂ ಬುದ್ಧಿವಾದ ಹೇಳಿದ್ದ ಮೇಘನಾ ಪೋಷಕರು ಬೇರೆ ಬೇರೆ ಮಾಡಿದ್ದರು ಎನ್ನಲಾಗಿದೆ.ಮೇಘನಾ ಒಪ್ಪಿಗೆ ಪಡೆದು ಮತ್ತೊಬ್ಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿದ್ದರು.

ಈ ವಿಚಾರ ತಿಳಿದು ನಿಶ್ಚಿತಾರ್ಥ ಮಾಡಿಕೊಂಡ ಹುಡುಗನಿಗೆ ಪ್ರೀತಿ ವಿಚಾರ ತಿಳಿಸಿದ್ದ ಮಣಿಕಂಠತನ್ನ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ಮೇಘನಾಗೆ ಒತ್ತಾಯಿಸಿದ ಮಣಿಕಂಠಇಬ್ಬರೂ ಒಟ್ಟಿಗೆ ಇರುವ ಫೋಟೋ ವಾಟ್ಸಾಪ್‌‌ ಸೇರಿದಂತೆಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆಯನ್ನೂ ಒಡ್ಡಿದ್ದ. ಇವೆಲ್ಲಾ ಬೆಳವಣಿಗೆಯಿಂದ ನೊಂದ ಮೇಘನಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಮಣಿಕಂಠನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆಮೇಘನಾ ತಂದೆ ಮಹದೇವಯ್ಯ ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡ ದೊಡ್ಡಕವಲಂದೆ ಠಾಣೆ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT