ಮೈಸೂರು: ಇಲ್ಲಿನ ಕುವೆಂಪುನಗರದ ಜೋಡಿರಸ್ತೆಯಲ್ಲಿರುವ ಪ್ರಸನ್ನ ಶಿವಲಿಂಗೇಶ್ವರ ಸ್ವಾಮಿ ಮತ್ತು ಅನ್ನಪೂರ್ಣೇಶ್ವರಿ, ನವಗ್ರಹ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಗುರುವಾರ ವಿಶೇಷ ಪೂಜೆ ನೆರವೇರಿತು.
ಬೆಳಿಗ್ಗೆ 7 ಗಂಟೆಗೆ ಮೊದಲನೇ ರುದ್ರಾಭಿಷೇಕ ಪೂಜೆಯಿಂದ ಆರಂಭವಾದ ಪೂಜಾ ಕೈಂಕರ್ಯಗಳು ರಾತ್ರಿಯವರೆಗೂ ನಡೆದವು. ಜತೆಗೆ, ಹಲವು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.