ದಲಿತ ಸಂಘರ್ಷ ಸಮಿತಿ ಸಂಚಲಕ ಬೆಟ್ಟಯ್ಯ ಕೋಟೆ ಮಾತನಾಡಿ, ‘ಶಾಂತಿಯುತವಾಗಿ ರ್ಯಾಲಿ ನಡೆಸಿ, ಮಹಿಷ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಪೊಲೀಸರು ಅವಕಾಶ ಕೊಡುತ್ತಿಲ್ಲ. ಎಲ್ಲ ತಾಲ್ಲೂಕುಗಳಿಂದಲೂ ಸುಮಾರು 5 ಸಾವಿರ ಮಂದಿ ಬರುವ ನಿರೀಕ್ಷೆ ಇತ್ತು. ಆದರೆ, ಪೊಲೀಸರು ಅಲ್ಲಲ್ಲೇ ಎಲ್ಲರನ್ನೂ ತಡೆದಿದ್ದಾರೆ. ಇದೊಂದು ರೀತಿಯ ಸರ್ವಾಧಿಕಾರಿ ವರ್ತನೆ’ ಎಂದು ಕಿಡಿಕಾರಿದರು.