ತಾಲ್ಲೂಕಿನಲ್ಲಿ ಕೃಷಿ ಪತ್ತಿನ ಸಹಕಾರ ಸಂಘ, ಎಂಡಿಸಿಸಿ ಬ್ಯಾಂಕ್ ಮತ್ತು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಸ್ತಿತ್ವವನ್ನು ಭದ್ರಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ವಿವಿಧ ಪಕ್ಷಗಳ ಮುಖಂಡರನ್ನು ಸೇರ್ಪಡೆ ಮಾಡಿಕೊಳ್ಳುತ್ತಿದೆ. ಪಿಎಲ್ಡಿ ಬ್ಯಾಂಕ್ ಮತ್ತು ಪುರಸಭೆಯಲ್ಲಿ ಅಧಿಕಾರದಲ್ಲಿ ಇರುವ ಜೆಡಿಎಸ್ ಪಕ್ಷವನ್ನು ಸದೃಢಗೊಳಿಸಲು ಶಾಸಕ ಡಾ.ಕೆ.ಅನ್ನದಾನಿ ಅವರು ಜಿ.ಪಂ.ಸದಸ್ಯರೊಬ್ಬರನ್ನು ಸೆಳೆದಿದ್ದಾರೆ.