<p><strong>ಹನಗೋಡು:</strong> ಐದು ವರ್ಷದ ಗಂಡು ಚಿರತೆಯೊಂದು ಬೇಲಿಯ ಉರುಳಿಗೆ ಸಿಲುಕಿ ಹುಣಸೂರು ವಲಯದ ಮುದ್ದನಹಳ್ಳಿ ವ್ಯಾಪ್ತಿಯಲ್ಲಿ ಮೃತಪಟ್ಟಿದೆ.</p>.<p>ದಾರಿಹೋಕರು ಚಿರತೆ ನೋಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಹುಣಸೂರು - ತಿತಿಮತಿ ಮುಖ್ಯ ರಸ್ತೆಯ ಮುದ್ದನಹಳ್ಳಿ ಗಸ್ತು ವ್ಯಾಪ್ತಿಯಲ್ಲಿ ಬರುವ ಉತ್ತೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರ ಜಮೀನಿನಲ್ಲಿ ತಂತಿ ಬೇಲಿಗೆ ಉರುಳು ಕಟ್ಟಲಾಗಿತ್ತು.</p>.<p>ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಡಿಸಿಎಫ್ ಮಹೇಶ್ ಕುಮಾರ್, ಎಸಿಎಫ್ ಸತೀಶ್, ಆರ್ಎಫ್ಒ ಹನುಮಂತರಾಜು, ಡಿಆರ್ಎಫ್ಒ ಸಿದ್ದರಾಜು, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನಾಮನಿರ್ದೇಶನ ಸದಸ್ಯ ವೆಂಕಟ ನಾಯ್ಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಶುವೈದ್ಯ ಡಾ.ರೆಹಮಾನ್ ಮುಜೀಬ್ ಚಿರತೆಯ ಶವ ಪರೀಕ್ಷೆ ನಡೆಸಿದರು. ನಂತರ ಅರಣ್ಯದಲ್ಲಿ ಬೆಂಕಿಯಿಂದ ಸುಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನಗೋಡು:</strong> ಐದು ವರ್ಷದ ಗಂಡು ಚಿರತೆಯೊಂದು ಬೇಲಿಯ ಉರುಳಿಗೆ ಸಿಲುಕಿ ಹುಣಸೂರು ವಲಯದ ಮುದ್ದನಹಳ್ಳಿ ವ್ಯಾಪ್ತಿಯಲ್ಲಿ ಮೃತಪಟ್ಟಿದೆ.</p>.<p>ದಾರಿಹೋಕರು ಚಿರತೆ ನೋಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಹುಣಸೂರು - ತಿತಿಮತಿ ಮುಖ್ಯ ರಸ್ತೆಯ ಮುದ್ದನಹಳ್ಳಿ ಗಸ್ತು ವ್ಯಾಪ್ತಿಯಲ್ಲಿ ಬರುವ ಉತ್ತೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರ ಜಮೀನಿನಲ್ಲಿ ತಂತಿ ಬೇಲಿಗೆ ಉರುಳು ಕಟ್ಟಲಾಗಿತ್ತು.</p>.<p>ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಡಿಸಿಎಫ್ ಮಹೇಶ್ ಕುಮಾರ್, ಎಸಿಎಫ್ ಸತೀಶ್, ಆರ್ಎಫ್ಒ ಹನುಮಂತರಾಜು, ಡಿಆರ್ಎಫ್ಒ ಸಿದ್ದರಾಜು, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನಾಮನಿರ್ದೇಶನ ಸದಸ್ಯ ವೆಂಕಟ ನಾಯ್ಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಶುವೈದ್ಯ ಡಾ.ರೆಹಮಾನ್ ಮುಜೀಬ್ ಚಿರತೆಯ ಶವ ಪರೀಕ್ಷೆ ನಡೆಸಿದರು. ನಂತರ ಅರಣ್ಯದಲ್ಲಿ ಬೆಂಕಿಯಿಂದ ಸುಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>