<p><strong>ಮೈಸೂರು</strong>: ‘ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ, ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಅವರನ್ನು ಅಮಾನತು ಮಾಡಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ದೀಪಬುದ್ಧೆ ಆಗ್ರಹಿಸಿದರು.</p>.<p>‘ಗಣರಾಜ್ಯೋತ್ಸವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ. ನ್ಯಾಯ ನೀಡುವ ನ್ಯಾಯಾಧೀಶರೇ ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದು ಎಷ್ಟು ಸರಿ? ಇವರ ವಿರುದ್ಧ ರಾಜ್ಯ ಸರ್ಕಾರವೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಮಲ್ಲಿಕಾರ್ಜುನ ಗೌಡ ಅಮಾನತಿಗೆ ಆಗ್ರಹಿಸಿ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಜ.27ರಿಂದ ಅಂಚೆ ಚಳವಳಿ ನಡೆಸಿದ್ದು, 1,500 ವಿದ್ಯಾರ್ಥಿಗಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ’ ಎಂದು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಾದ ಎಸ್.ಎಂ.ನವೀನ, ಪ್ರಮೀಳಾ, ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ, ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಅವರನ್ನು ಅಮಾನತು ಮಾಡಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ದೀಪಬುದ್ಧೆ ಆಗ್ರಹಿಸಿದರು.</p>.<p>‘ಗಣರಾಜ್ಯೋತ್ಸವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ. ನ್ಯಾಯ ನೀಡುವ ನ್ಯಾಯಾಧೀಶರೇ ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದು ಎಷ್ಟು ಸರಿ? ಇವರ ವಿರುದ್ಧ ರಾಜ್ಯ ಸರ್ಕಾರವೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಮಲ್ಲಿಕಾರ್ಜುನ ಗೌಡ ಅಮಾನತಿಗೆ ಆಗ್ರಹಿಸಿ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಜ.27ರಿಂದ ಅಂಚೆ ಚಳವಳಿ ನಡೆಸಿದ್ದು, 1,500 ವಿದ್ಯಾರ್ಥಿಗಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ’ ಎಂದು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಾದ ಎಸ್.ಎಂ.ನವೀನ, ಪ್ರಮೀಳಾ, ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>