<p><strong>ಮೈಸೂರು:</strong> ನಗರದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಅರವಿಂದನಗರದ ಬಸ್ ಡಿಪೋ ಹಿಂಭಾಗದ ಕಾಂಪೌಂಡ್ ಕುಸಿದು, ನಂಜುಂಡಸ್ವಾಮಿ (58) ಎಂಬವರು ಮೃತಪಟ್ಟಿದ್ದಾರೆ.</p>.<p>ನಗರದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಗೋಡೆ ಶಿಥಿಲಗೊಂಡು ಕುಸಿದುಬಿದ್ದಿದೆ. ಸಮೀಪ ನಿಲ್ಲಿಸಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ.</p>.<p>ಧಾರಾಕಾರ ಮಳೆ: ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ.</p>.<p>ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ ಒಂದೂವರೆ ತಾಸು ಜೋರಾಗಿ ಸುರಿಯಿತು. ಆ ಬಳಿಕ ಜಿಟಿಜಿಟಿ ಮಳೆ ಮುಂದುವರಿಯಿತು.</p>.<p>ಜಿಲ್ಲೆಯ ಪಿರಿಯಾಪಟ್ಟಣ, ತಿ.ನರಸೀಪುರ, ಹುಣಸೂರು, ಸಾಲಿಗ್ರಾಮ, ಬೆಟ್ಟದಪುರ, ಜಯಪುರ ಹೋಬಳಿಯಾದ್ಯಂತ ಉತ್ತಮ ಮಳೆಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಅರವಿಂದನಗರದ ಬಸ್ ಡಿಪೋ ಹಿಂಭಾಗದ ಕಾಂಪೌಂಡ್ ಕುಸಿದು, ನಂಜುಂಡಸ್ವಾಮಿ (58) ಎಂಬವರು ಮೃತಪಟ್ಟಿದ್ದಾರೆ.</p>.<p>ನಗರದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಗೋಡೆ ಶಿಥಿಲಗೊಂಡು ಕುಸಿದುಬಿದ್ದಿದೆ. ಸಮೀಪ ನಿಲ್ಲಿಸಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ.</p>.<p>ಧಾರಾಕಾರ ಮಳೆ: ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ.</p>.<p>ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ ಒಂದೂವರೆ ತಾಸು ಜೋರಾಗಿ ಸುರಿಯಿತು. ಆ ಬಳಿಕ ಜಿಟಿಜಿಟಿ ಮಳೆ ಮುಂದುವರಿಯಿತು.</p>.<p>ಜಿಲ್ಲೆಯ ಪಿರಿಯಾಪಟ್ಟಣ, ತಿ.ನರಸೀಪುರ, ಹುಣಸೂರು, ಸಾಲಿಗ್ರಾಮ, ಬೆಟ್ಟದಪುರ, ಜಯಪುರ ಹೋಬಳಿಯಾದ್ಯಂತ ಉತ್ತಮ ಮಳೆಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>