ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸೂರು ತಾಲ್ಲೂಕಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು

Last Updated 3 ಫೆಬ್ರುವರಿ 2022, 4:00 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನಕೊಳವಿಗೆ ಗ್ರಾಮದ ನಿವಾಸಿ ರಾಜೇಶ್ (55) ಅವರು ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಇವರು ಬುಧವಾರ ರಾತ್ರಿ ಮನೆ ಹಿತ್ತಿಲಿನಲ್ಲಿ ಹಸುವಿಗೆ ಹುಲ್ಲು ತರಲು ಹೋದ ಸಮಯದಲ್ಲಿ ಆನೆ ತುಳಿದಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದರು. ಹುಲಿ ಯೋಜನಾ ನಿರ್ದೇಶಕರು ಬರಬೇಕು ಎಂದು ಸ್ಥಳಿಯರು ಪಟ್ಟು ಹಿಡಿದಿದ್ದಾರೆ.

ತಾಲ್ಲೂಕಿನ ನಾಗಾಪುರ ಪುನರ್ವಸತಿ ಕೇಂದ್ರದ 6 ನೇ ಬ್ಲಾಕ್ ನ ರಾಜು ಎಂಬುವವರ ಮನೆಯನ್ನು ಕಾಡಾನೆ ಜಖಂಗೊಳಿಸಿದೆ. ಬೆಳಿಗ್ಗೆ 6 ಗಂಟೆಗೆ ನುಗ್ಗಿದ ಕಾಡಾನೆ ಹಿಂಡು ಗಿರಿಜನರ ಬೆಳೆಯನ್ನು ದ್ವಂಸಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT