ಮೈಸೂರು: ಕೋವಿಡ್ ಸಾಂಕ್ರಾಮಿಕ ಸೋಂಕಿನ ತೀವ್ರತೆ ಕ್ಷೀಣಿಸಿದ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸ್ವಾಗತಾರ್ಹ. ಆದರೆ ಎಲ್ಲರನ್ನೂ ಉತ್ತೀರ್ಣಗೊಳಿಸುವುದು, ಎ, ಬಿ, ಸಿ ಗ್ರೇಡಿಂಗ್ ಕೊಡುವುದು ಅವೈಜ್ಞಾನಿಕ. ಶಿಕ್ಷಣ ಇಲಾಖೆ ತನ್ನ ಈ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದ್ದಾರೆ.