ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ದೇವರಾಜ ಮಾರು ಕಟ್ಟೆಯ ತರಕಾರಿ ವ್ಯಾಪಾರಿ ಮೂರ್ತಿ, ‘ಮಾರುಕಟ್ಟೆಯಲ್ಲಿ ಸಾವಿರಕ್ಕೂ ಅಧಿಕ ತರಕಾರಿ ಅಂಗಡಿಗಳಿವೆ. ಇಷ್ಟು ಮಂದಿಯೂ ಹೊರಗೆ ಬಂದು ಮಾರಾಟ ಮಾಡಿದರೆ ಗುಂಪು ಹೆಚ್ಚಾಗುತ್ತದೆ. ಮಾರುಕಟ್ಟೆಯ ಒಳಗೆ ಮಾರಾಟ ಮಾಡಲು ಅನುಮತಿ ನೀಡಬೇಕು’ ಎಂದು ಮನವಿ ಮಾಡಿದರು.