<p><strong>ಮೈಸೂರು: </strong>ಎರಡು ತಿಂಗಳುಗಳ ನಂತರ ಇಲ್ಲಿನ ದೇವರಾಜ, ಮಂಡಿ ಹಾಗೂ ವಾಣಿವಿಲಾಸ ಮಾರುಕಟ್ಟೆಗಳು ಬುಧವಾರ ಕಾರ್ಯಾರಂಭ ಮಾಡಿವೆ. ಆದರೆ, ಮೊದಲ ದಿನ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಮಂಗಳವಾರವೇ ಪಾಲಿಕೆ ವತಿಯಿಂದ ಮಾರುಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿತ್ತು. ಬೆಳಿಗ್ಗೆ ಮಾರುಕಟ್ಟೆಯಲ್ಲಿರುವ ಬಹುತೇಕ ಮಳಿಗೆಗಳ ಮಾಲೀಕರು ಅಂಗಡಿಗಳ ಬಾಗಿಲುಗಳನ್ನು ತೆರೆದರು. ಆದರೆ, ವಹಿವಾಟು ಶೇ 10ರಷ್ಟು ನಡೆಯಲಿಲ್ಲ ಎಂದು ವ್ಯಾಪಾರಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ‘ಪ್ರಜಾವಾಣಿ’ ದೇವರಾಜ ಮಾರುಕಟ್ಟೆ ಬಾಡಿಗೆದಾರರ ಸಂಘದ ಅಧ್ಯಕ್ಷ ಪೈಲ್ವಾನ್ ಎಸ್.ಮಹದೇವ್ ಅವರನ್ನು ಸಂಪರ್ಕಿಸಿದಾಗ ಅವರು, ‘ಮಾರುಕಟ್ಟೆಯಲ್ಲಿ ಅಂಗಡಿಗಳ ಮಾಲೀಕರು ಹಾಗೂ ಕೆಲಸಗಾರರು ಬಿಟ್ಟರೆ ಖರೀದಿದಾರರು ಕಾಣಸಿಗಲಿಲ್ಲ’ ಎಂದು ಹೇಳಿದರು.</p>.<p>ಆಷಾಢ ಮಾಸದ ಹೊಸ್ತಿಲಿನಲ್ಲಿ ಸಾಮಾನ್ಯವಾಗಿ ವ್ಯಾಪಾರ ಕಡಿಮೆ. ಆದರೆ, ಈ ಬಾರಿ ಕೊರೊನಾ ಭೀತಿಯ ಜತೆಗೆ, ಮಾರುಕಟ್ಟೆ ತೆರೆದಿರುವುದು ಬಹುತೇಕ ಮಂದಿಗೆ ಗೊತ್ತೇ ಆಗಿಲ್ಲ. ಈ ಎಲ್ಲ ಕಾರಣಗಳಿಂದ ಗ್ರಾಹಕರು ಮಾರುಕಟ್ಟೆಯತ್ತ ಸುಳಿದಿಲ್ಲ ಎಂದು ತಿಳಿಸಿದರು.</p>.<p>ಪಾಲಿಕೆ ವತಿಯಿಂದ ಪ್ರತಿ ವ್ಯಾಪಾರಸ್ಥರಿಗೆ ಕೋವಿಡ್ ಪರೀಕ್ಷೆ ಮಾಡುವ ಕಾರ್ಯ ಆರಂಭಗೊಂಡಿದೆ. ನಂತರ, ವ್ಯಾಪಾರಸ್ಥರಿಗೆ ಹಾಗೂ ಅವರ ಕುಟುಂಬದವರಿಗೆ ಕೋವಿಡ್ ಲಸಿಕೆ ನೀಡಲು ತೀರ್ಮಾನಿಸಲಾಗಿದೆ.</p>.<p>ದೇವರಾಜ ಮಾರುಕಟ್ಟೆಯಲ್ಲಿ 882 ಮಳಿಗೆಗಳು ಹಾಗೂ 250 ದಿನವಹಿ ಶುಲ್ಕ ಪಾವತಿಸುವ ಮಳಿಗೆಗಳು ಇವೆ. ಮಂಡಿ ಮಾರುಕಟ್ಟೆಯಲ್ಲಿ 145 ಹಾಗೂ ವಾಣಿವಿಲಾಸ ಮಾರುಕಟ್ಟೆಯಲ್ಲಿ 90 ಮಳಿಗೆಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಎರಡು ತಿಂಗಳುಗಳ ನಂತರ ಇಲ್ಲಿನ ದೇವರಾಜ, ಮಂಡಿ ಹಾಗೂ ವಾಣಿವಿಲಾಸ ಮಾರುಕಟ್ಟೆಗಳು ಬುಧವಾರ ಕಾರ್ಯಾರಂಭ ಮಾಡಿವೆ. ಆದರೆ, ಮೊದಲ ದಿನ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಮಂಗಳವಾರವೇ ಪಾಲಿಕೆ ವತಿಯಿಂದ ಮಾರುಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿತ್ತು. ಬೆಳಿಗ್ಗೆ ಮಾರುಕಟ್ಟೆಯಲ್ಲಿರುವ ಬಹುತೇಕ ಮಳಿಗೆಗಳ ಮಾಲೀಕರು ಅಂಗಡಿಗಳ ಬಾಗಿಲುಗಳನ್ನು ತೆರೆದರು. ಆದರೆ, ವಹಿವಾಟು ಶೇ 10ರಷ್ಟು ನಡೆಯಲಿಲ್ಲ ಎಂದು ವ್ಯಾಪಾರಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ‘ಪ್ರಜಾವಾಣಿ’ ದೇವರಾಜ ಮಾರುಕಟ್ಟೆ ಬಾಡಿಗೆದಾರರ ಸಂಘದ ಅಧ್ಯಕ್ಷ ಪೈಲ್ವಾನ್ ಎಸ್.ಮಹದೇವ್ ಅವರನ್ನು ಸಂಪರ್ಕಿಸಿದಾಗ ಅವರು, ‘ಮಾರುಕಟ್ಟೆಯಲ್ಲಿ ಅಂಗಡಿಗಳ ಮಾಲೀಕರು ಹಾಗೂ ಕೆಲಸಗಾರರು ಬಿಟ್ಟರೆ ಖರೀದಿದಾರರು ಕಾಣಸಿಗಲಿಲ್ಲ’ ಎಂದು ಹೇಳಿದರು.</p>.<p>ಆಷಾಢ ಮಾಸದ ಹೊಸ್ತಿಲಿನಲ್ಲಿ ಸಾಮಾನ್ಯವಾಗಿ ವ್ಯಾಪಾರ ಕಡಿಮೆ. ಆದರೆ, ಈ ಬಾರಿ ಕೊರೊನಾ ಭೀತಿಯ ಜತೆಗೆ, ಮಾರುಕಟ್ಟೆ ತೆರೆದಿರುವುದು ಬಹುತೇಕ ಮಂದಿಗೆ ಗೊತ್ತೇ ಆಗಿಲ್ಲ. ಈ ಎಲ್ಲ ಕಾರಣಗಳಿಂದ ಗ್ರಾಹಕರು ಮಾರುಕಟ್ಟೆಯತ್ತ ಸುಳಿದಿಲ್ಲ ಎಂದು ತಿಳಿಸಿದರು.</p>.<p>ಪಾಲಿಕೆ ವತಿಯಿಂದ ಪ್ರತಿ ವ್ಯಾಪಾರಸ್ಥರಿಗೆ ಕೋವಿಡ್ ಪರೀಕ್ಷೆ ಮಾಡುವ ಕಾರ್ಯ ಆರಂಭಗೊಂಡಿದೆ. ನಂತರ, ವ್ಯಾಪಾರಸ್ಥರಿಗೆ ಹಾಗೂ ಅವರ ಕುಟುಂಬದವರಿಗೆ ಕೋವಿಡ್ ಲಸಿಕೆ ನೀಡಲು ತೀರ್ಮಾನಿಸಲಾಗಿದೆ.</p>.<p>ದೇವರಾಜ ಮಾರುಕಟ್ಟೆಯಲ್ಲಿ 882 ಮಳಿಗೆಗಳು ಹಾಗೂ 250 ದಿನವಹಿ ಶುಲ್ಕ ಪಾವತಿಸುವ ಮಳಿಗೆಗಳು ಇವೆ. ಮಂಡಿ ಮಾರುಕಟ್ಟೆಯಲ್ಲಿ 145 ಹಾಗೂ ವಾಣಿವಿಲಾಸ ಮಾರುಕಟ್ಟೆಯಲ್ಲಿ 90 ಮಳಿಗೆಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>