<p><strong>ಮೈಸೂರು:</strong> ಮೈಸೂರು ಪ್ರಜ್ಞಾವಂತ ನಾಗರಿಕರ ವೇದಿಕೆ ವತಿಯಿಂದ ಸೋಮ ವಾರ ನಗರದಲ್ಲಿ ‘ಮಾಸ್ಕ್ ಹಾಕೋಣ, ಕೊರೊನಾ ನಿಯಂತ್ರಿಸೋಣ’ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.</p>.<p>ನ್ಯಾಯಾಲಯದ ಮುಂಭಾಗದಲ್ಲಿ ಗಾಂಧೀಜಿ ಪ್ರತಿಮೆಗೆ ಮಾಸ್ಕ್ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.</p>.<p>ಈ ವೇಳೆ ಮಾತನಾಡಿದ ಯುವ ಮುಖಂಡ ಅಜಯ್ ಶಾಸ್ತ್ರಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸದ ಕಾರಣ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ ಎಂದರು.</p>.<p>ಮಾಸ್ಕ್ ಹಾಕಿದವರಿಗೆ ಮಾತ್ರ ಮಾರುಕಟ್ಟೆ, ಅಂಗಡಿ, ಸರ್ಕಾರಿ ಕಚೇರಿಗಳಲ್ಲಿ ಪ್ರವೇಶ ನೀಡಬೇಕು. ಪಾಲಿಕೆ ಮತ್ತು ಜಿಲ್ಲಾಡಳಿತ ಈ ಸಂಬಂಧ ವ್ಯಾಪಾರಿಗಳಿಗೆ ಸೂಚನೆ ನೀಡಬೇಕು. ದಸರಾ ಸಮೀಪಿಸುತ್ತಿದ್ದು, ಪ್ರವಾಸಿಗರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ಆದ್ದರಿಂದ ಬೇರೆ ಕಡೆಗಳಿಂದ ನಗರಕ್ಕೆ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ವಿನಯ್ ಕಣಗಾಲ್, ನವೀನ್ ಕೆಂಪಿ, ಸುಚೀಂದ್ರ, ಚಕ್ರಪಾಣಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು ಪ್ರಜ್ಞಾವಂತ ನಾಗರಿಕರ ವೇದಿಕೆ ವತಿಯಿಂದ ಸೋಮ ವಾರ ನಗರದಲ್ಲಿ ‘ಮಾಸ್ಕ್ ಹಾಕೋಣ, ಕೊರೊನಾ ನಿಯಂತ್ರಿಸೋಣ’ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.</p>.<p>ನ್ಯಾಯಾಲಯದ ಮುಂಭಾಗದಲ್ಲಿ ಗಾಂಧೀಜಿ ಪ್ರತಿಮೆಗೆ ಮಾಸ್ಕ್ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.</p>.<p>ಈ ವೇಳೆ ಮಾತನಾಡಿದ ಯುವ ಮುಖಂಡ ಅಜಯ್ ಶಾಸ್ತ್ರಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸದ ಕಾರಣ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ ಎಂದರು.</p>.<p>ಮಾಸ್ಕ್ ಹಾಕಿದವರಿಗೆ ಮಾತ್ರ ಮಾರುಕಟ್ಟೆ, ಅಂಗಡಿ, ಸರ್ಕಾರಿ ಕಚೇರಿಗಳಲ್ಲಿ ಪ್ರವೇಶ ನೀಡಬೇಕು. ಪಾಲಿಕೆ ಮತ್ತು ಜಿಲ್ಲಾಡಳಿತ ಈ ಸಂಬಂಧ ವ್ಯಾಪಾರಿಗಳಿಗೆ ಸೂಚನೆ ನೀಡಬೇಕು. ದಸರಾ ಸಮೀಪಿಸುತ್ತಿದ್ದು, ಪ್ರವಾಸಿಗರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ಆದ್ದರಿಂದ ಬೇರೆ ಕಡೆಗಳಿಂದ ನಗರಕ್ಕೆ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ವಿನಯ್ ಕಣಗಾಲ್, ನವೀನ್ ಕೆಂಪಿ, ಸುಚೀಂದ್ರ, ಚಕ್ರಪಾಣಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>