ಮಾಸ್ಕ್ ಹಾಕಿದವರಿಗೆ ಮಾತ್ರ ಮಾರುಕಟ್ಟೆ, ಅಂಗಡಿ, ಸರ್ಕಾರಿ ಕಚೇರಿಗಳಲ್ಲಿ ಪ್ರವೇಶ ನೀಡಬೇಕು. ಪಾಲಿಕೆ ಮತ್ತು ಜಿಲ್ಲಾಡಳಿತ ಈ ಸಂಬಂಧ ವ್ಯಾಪಾರಿಗಳಿಗೆ ಸೂಚನೆ ನೀಡಬೇಕು. ದಸರಾ ಸಮೀಪಿಸುತ್ತಿದ್ದು, ಪ್ರವಾಸಿಗರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ಆದ್ದರಿಂದ ಬೇರೆ ಕಡೆಗಳಿಂದ ನಗರಕ್ಕೆ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.