ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಆ.26ರಂದು ಕುಲಸಚಿವ ಪ್ರೊ.ಆರ್.ಶಿವಪ್ಪ ಅವರು ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಿದ್ದರು. ‘ಕ್ಯಾಂಪಸ್ನಲ್ಲಿ ಸಂಜೆ 6.30ರ ನಂತರ ಹೆಣ್ಣು ಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು ಹಾಗೂ ಕೂರುವುದನ್ನು ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ’ ಎಂದು ಉಲ್ಲೇಖಿಸಿದ್ದರು.