<p><strong>ಮೈಸೂರು: </strong>ದೇಶದಲ್ಲಿ ಪ್ರಜಾಪ್ರಭುತ್ವ, ಸಮಾನತೆ, ಭ್ರಾತೃತ್ವಕ್ಕೆ ಅಪಾಯ ಒದಗಿದೆ ಎಂದು ಗಾಂಧೀಜಿ ಅವರ ಮೊಮ್ಮಗ ರಾಜಮೋಹನ ಗಾಂಧಿ ಆತಂಕ ವ್ಯಕ್ತಪಡಿಸಿದರು.</p>.<p>ಗಾಂಧಿ ವಿಚಾರ ಪರಿಷತ್ತು ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ 'ಮಾಧ್ಯಮ: ಪ್ರಜಾಸತ್ತೆ' ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭಾರತವು ಹಿಂದೂಗಳಿಗೆ ಮಾತ್ರ ಸೇರಿದ್ದು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಗಾಂಧಿ ಅವರು ಈ ದೇಶ ಎಲ್ಲರಿಗೂ ಸೇರಿದ್ದು ಎಂದು ಪ್ರತಿಪಾದಿಸಿದ್ದರು. ಗಾಂಧೀಜಿ ತತ್ವಗಳನ್ನು ಎತ್ತಿಹಿಡಿಯಬೇಕು ಎಂದು ಕರೆ ನೀಡಿದರು.</p>.<p>ಸಿಎಎ ಮತ್ತು ಎನ್ ಆರ್ ಸಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕಾಯ್ದೆ ಅಸಾಂವಿಧಾನಿಕ ಮಾತ್ರವಲ್ಲದೆ, ಸಾಮಾನ್ಯ ಜನರ ಮೇಲಿನ ಕ್ರೌರ್ಯ ಎಂದು ಟೀಕಿಸಿದರು.</p>.<p>ನಾವೆಲ್ಲರೂ ಭಾರತೀಯರು. ಆದರೂ ಪೌರತ್ವ ಸಾಬೀತುಪಡಿಸಬೇಕು ಎಂದು ಹೇಳುತ್ತಿರುವುದರಲ್ಲಿ ಅರ್ಥವಿಲ್ಲ. ಇದು ದುರದೃಷ್ಟಕರ ಕಾಯ್ದೆ ಎಂದು ದೂರಿದರು.</p>.<p>ಕಾಂಗ್ರೆಸ್ ಮುಖಂಡ ಎಚ್.ಸಿ.ಮಹದೇವಪ್ಪ, ಗಾಂಧಿ ವಿಚಾರ ಪರಿಷತ್ತು ಅಧ್ಯಕ್ಷ ಪ.ಮಲ್ಲೇಶ್, ಮೈಸೂರು ವಿ.ವಿ.ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.</p>.<p>ಮಧ್ಯಾಹ್ನ ನಡೆಯಲಿರುವ ವಿಚಾರಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್, ಕುಮಾರ್ ಕೇತ್ಕರ್, ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಸೀಮಾ ಮುಸ್ತಫಾ, ಲಕ್ಷ್ಮೀಶ ತೋಳ್ಪಾಡಿ ವಿವಿಧ ವಿಷಯಗಳಲ್ಲಿ ವಿಚಾರ ಮಂಡನೆ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ದೇಶದಲ್ಲಿ ಪ್ರಜಾಪ್ರಭುತ್ವ, ಸಮಾನತೆ, ಭ್ರಾತೃತ್ವಕ್ಕೆ ಅಪಾಯ ಒದಗಿದೆ ಎಂದು ಗಾಂಧೀಜಿ ಅವರ ಮೊಮ್ಮಗ ರಾಜಮೋಹನ ಗಾಂಧಿ ಆತಂಕ ವ್ಯಕ್ತಪಡಿಸಿದರು.</p>.<p>ಗಾಂಧಿ ವಿಚಾರ ಪರಿಷತ್ತು ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ 'ಮಾಧ್ಯಮ: ಪ್ರಜಾಸತ್ತೆ' ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭಾರತವು ಹಿಂದೂಗಳಿಗೆ ಮಾತ್ರ ಸೇರಿದ್ದು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಗಾಂಧಿ ಅವರು ಈ ದೇಶ ಎಲ್ಲರಿಗೂ ಸೇರಿದ್ದು ಎಂದು ಪ್ರತಿಪಾದಿಸಿದ್ದರು. ಗಾಂಧೀಜಿ ತತ್ವಗಳನ್ನು ಎತ್ತಿಹಿಡಿಯಬೇಕು ಎಂದು ಕರೆ ನೀಡಿದರು.</p>.<p>ಸಿಎಎ ಮತ್ತು ಎನ್ ಆರ್ ಸಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕಾಯ್ದೆ ಅಸಾಂವಿಧಾನಿಕ ಮಾತ್ರವಲ್ಲದೆ, ಸಾಮಾನ್ಯ ಜನರ ಮೇಲಿನ ಕ್ರೌರ್ಯ ಎಂದು ಟೀಕಿಸಿದರು.</p>.<p>ನಾವೆಲ್ಲರೂ ಭಾರತೀಯರು. ಆದರೂ ಪೌರತ್ವ ಸಾಬೀತುಪಡಿಸಬೇಕು ಎಂದು ಹೇಳುತ್ತಿರುವುದರಲ್ಲಿ ಅರ್ಥವಿಲ್ಲ. ಇದು ದುರದೃಷ್ಟಕರ ಕಾಯ್ದೆ ಎಂದು ದೂರಿದರು.</p>.<p>ಕಾಂಗ್ರೆಸ್ ಮುಖಂಡ ಎಚ್.ಸಿ.ಮಹದೇವಪ್ಪ, ಗಾಂಧಿ ವಿಚಾರ ಪರಿಷತ್ತು ಅಧ್ಯಕ್ಷ ಪ.ಮಲ್ಲೇಶ್, ಮೈಸೂರು ವಿ.ವಿ.ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.</p>.<p>ಮಧ್ಯಾಹ್ನ ನಡೆಯಲಿರುವ ವಿಚಾರಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್, ಕುಮಾರ್ ಕೇತ್ಕರ್, ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಸೀಮಾ ಮುಸ್ತಫಾ, ಲಕ್ಷ್ಮೀಶ ತೋಳ್ಪಾಡಿ ವಿವಿಧ ವಿಷಯಗಳಲ್ಲಿ ವಿಚಾರ ಮಂಡನೆ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>