<p><strong>ಮೈಸೂರು</strong>: ಗ್ರಾಮಾಂತರ ಪ್ರದೇಶಗಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗಿ ಕೋವಿಡ್ ಉಲ್ಬಣಿಸದಂತೆ ತಡೆಯಲು ಸರ್ಕಾರೇತರ ಸಂಸ್ಥೆಗಳು ಮುಂದಾಗಿವೆ.</p>.<p>ಮಂತ್ರ ಫಾರ್ ಜೇಂಜ್ ಮತ್ತು ಸೂರ್ಯ ಫೌಂಡೇಷನ್ ಸಂಸ್ಥೆಗಳು ಈ ನಿಟ್ಟಿನಲ್ಲಿ ಮುಂದಾಗಿದ್ದು, ಜಿಲ್ಲೆಯ ಎರಡು ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕ ಬೆಡ್ ವ್ಯವಸ್ಥೆ ಕಲ್ಪಿಸಲು ಅಗತ್ಯ ವೈದ್ಯಕೀಯ ಪರಿಕರಗಳನ್ನು ವಿತರಿಸುತ್ತಿವೆ ಎಂದು ಸುಜೀವ್ ಸಂಸ್ಥೆಯ ಮುಖ್ಯಸ್ಥ ರಾಜಾರಾಂ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನ ನಂದಿನಾಥಪುರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ 5 ಮಂಚ, ಹಾಸಿಗೆ, 10 ಲೀಟರ್ ಸಾಮರ್ಥ್ಯದ 5 ಆಮ್ಲಜನಕ ಕಾನ್ಸನ್ಟ್ರೇಟರ್ಸ್, 10 ಲೀಟರ್ ಸಾಮರ್ಥ್ಯದ 5 ಆಮ್ಲಜನಕ ಸಿಲಿಂಡರ್ಗಳನ್ನು ವಿತರಿಸಲಾಗುತ್ತಿದೆ. ಇವುಗಳ ಒಟ್ಟು ₹ 15 ಲಕ್ಷಕ್ಕೂ ಹೆಚ್ಚಿದೆ ಎಂದು ಅವರು ತಿಳಿಸಿದರು.</p>.<p>ಇನ್ಫೋಸಿಸ್ನ ಶಿಬುಲಾಲ್ ಅವರ ಸಹಕಾರ ಈ ಕಾರ್ಯಕ್ಕೆ ಇದೆ ಎಂದರು.ಮಂತ್ರ ಫೌಂಡೇಷನ್ನ ಪುನೀತ್, ಸೂರ್ಯ ಫೌಂಡೇಶನ್ನ ಶರವಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಗ್ರಾಮಾಂತರ ಪ್ರದೇಶಗಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗಿ ಕೋವಿಡ್ ಉಲ್ಬಣಿಸದಂತೆ ತಡೆಯಲು ಸರ್ಕಾರೇತರ ಸಂಸ್ಥೆಗಳು ಮುಂದಾಗಿವೆ.</p>.<p>ಮಂತ್ರ ಫಾರ್ ಜೇಂಜ್ ಮತ್ತು ಸೂರ್ಯ ಫೌಂಡೇಷನ್ ಸಂಸ್ಥೆಗಳು ಈ ನಿಟ್ಟಿನಲ್ಲಿ ಮುಂದಾಗಿದ್ದು, ಜಿಲ್ಲೆಯ ಎರಡು ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕ ಬೆಡ್ ವ್ಯವಸ್ಥೆ ಕಲ್ಪಿಸಲು ಅಗತ್ಯ ವೈದ್ಯಕೀಯ ಪರಿಕರಗಳನ್ನು ವಿತರಿಸುತ್ತಿವೆ ಎಂದು ಸುಜೀವ್ ಸಂಸ್ಥೆಯ ಮುಖ್ಯಸ್ಥ ರಾಜಾರಾಂ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನ ನಂದಿನಾಥಪುರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ 5 ಮಂಚ, ಹಾಸಿಗೆ, 10 ಲೀಟರ್ ಸಾಮರ್ಥ್ಯದ 5 ಆಮ್ಲಜನಕ ಕಾನ್ಸನ್ಟ್ರೇಟರ್ಸ್, 10 ಲೀಟರ್ ಸಾಮರ್ಥ್ಯದ 5 ಆಮ್ಲಜನಕ ಸಿಲಿಂಡರ್ಗಳನ್ನು ವಿತರಿಸಲಾಗುತ್ತಿದೆ. ಇವುಗಳ ಒಟ್ಟು ₹ 15 ಲಕ್ಷಕ್ಕೂ ಹೆಚ್ಚಿದೆ ಎಂದು ಅವರು ತಿಳಿಸಿದರು.</p>.<p>ಇನ್ಫೋಸಿಸ್ನ ಶಿಬುಲಾಲ್ ಅವರ ಸಹಕಾರ ಈ ಕಾರ್ಯಕ್ಕೆ ಇದೆ ಎಂದರು.ಮಂತ್ರ ಫೌಂಡೇಷನ್ನ ಪುನೀತ್, ಸೂರ್ಯ ಫೌಂಡೇಶನ್ನ ಶರವಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>