ಈ ಕುರಿತು ‘ಪ್ರಜಾವಾಣಿ’ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಶಿವಕುಮಾರ್ ಅವರನ್ನು ಸಂಪರ್ಕಿ ಸಿದಾಗ ಅವರು, ‘ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕುರಿತು ತೆಪ್ಪದ ಮಾಲೀಕರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಎಲ್ಲರಿಗೂ ಇಂತಹ ಅಜಾಗರೂಕತೆಯ ತೆಪ್ಪ ಚಾಲನೆ, ಫೋಟೊ ತೆಗೆಸಿಕೊಳ್ಳುವುದುಮತ್ತಿತರ ಕೆಲಸಗಳಿಗೆ ಸಹಕರಿಸಬಾರದು. ಲೈಫ್ ಜಾಕೆಟ್ ಸೇರಿದಂತೆ ಅಗತ್ಯ ಇರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಲಾಗುವುದು ಎಂದು ಹೇಳಿದರು.