<p><strong>ಮೈಸೂರು</strong>: ತಲಕಾಡಿನ ಮುಡುಕುತೊರೆಯ ಕಾವೇರಿ ನದಿಯಲ್ಲಿ ‘ಪ್ರಿ ವೆಡ್ಡಿಂಗ್ ಫೊಟೊಶೂಟ್’ ವೇಳೆ ತೆಪ್ಪ ಮುಳುಗಿ ನವಜೋಡಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.</p>.<p>ತೆಪ್ಪ ನಡೆಸುತ್ತಿದ್ದ ಕಟ್ಟೇಪುರದ ನಿವಾಸಿ ಮೂಗಪ್ಪ (50) ಎಂಬುವವರ ಮೇಲೆ ಪ್ರಕರಣ ದಾಖಲಿಸಿ, ಅವರ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ. ಇನ್ನುಳಿದ ತೆಪ್ಪಗಳ ಮಾಲೀಕರು ಮತ್ತು ಅಂಬಿಗರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ.</p>.<p>ಈ ಕುರಿತು ‘ಪ್ರಜಾವಾಣಿ’ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಶಿವಕುಮಾರ್ ಅವರನ್ನು ಸಂಪರ್ಕಿ ಸಿದಾಗ ಅವರು, ‘ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕುರಿತು ತೆಪ್ಪದ ಮಾಲೀಕರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಎಲ್ಲರಿಗೂ ಇಂತಹ ಅಜಾಗರೂಕತೆಯ ತೆಪ್ಪ ಚಾಲನೆ, ಫೋಟೊ ತೆಗೆಸಿಕೊಳ್ಳುವುದುಮತ್ತಿತರ ಕೆಲಸಗಳಿಗೆ ಸಹಕರಿಸಬಾರದು. ಲೈಫ್ ಜಾಕೆಟ್ ಸೇರಿದಂತೆ ಅಗತ್ಯ ಇರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಲಾಗುವುದು ಎಂದು ಹೇಳಿದರು.</p>.<p>ಇಂತಹ ಕೃತ್ಯಗಳನ್ನು ತಡೆಯಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ನೀರಾವರಿ ಸೇರಿದಂತೆ ಇತರೆ ಇಲಾಖೆಗಳಿಗೆ ಪತ್ರ ಬರೆಯಲೂ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ತಲಕಾಡಿನ ಮುಡುಕುತೊರೆಯ ಕಾವೇರಿ ನದಿಯಲ್ಲಿ ‘ಪ್ರಿ ವೆಡ್ಡಿಂಗ್ ಫೊಟೊಶೂಟ್’ ವೇಳೆ ತೆಪ್ಪ ಮುಳುಗಿ ನವಜೋಡಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.</p>.<p>ತೆಪ್ಪ ನಡೆಸುತ್ತಿದ್ದ ಕಟ್ಟೇಪುರದ ನಿವಾಸಿ ಮೂಗಪ್ಪ (50) ಎಂಬುವವರ ಮೇಲೆ ಪ್ರಕರಣ ದಾಖಲಿಸಿ, ಅವರ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ. ಇನ್ನುಳಿದ ತೆಪ್ಪಗಳ ಮಾಲೀಕರು ಮತ್ತು ಅಂಬಿಗರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ.</p>.<p>ಈ ಕುರಿತು ‘ಪ್ರಜಾವಾಣಿ’ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಶಿವಕುಮಾರ್ ಅವರನ್ನು ಸಂಪರ್ಕಿ ಸಿದಾಗ ಅವರು, ‘ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕುರಿತು ತೆಪ್ಪದ ಮಾಲೀಕರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಎಲ್ಲರಿಗೂ ಇಂತಹ ಅಜಾಗರೂಕತೆಯ ತೆಪ್ಪ ಚಾಲನೆ, ಫೋಟೊ ತೆಗೆಸಿಕೊಳ್ಳುವುದುಮತ್ತಿತರ ಕೆಲಸಗಳಿಗೆ ಸಹಕರಿಸಬಾರದು. ಲೈಫ್ ಜಾಕೆಟ್ ಸೇರಿದಂತೆ ಅಗತ್ಯ ಇರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಲಾಗುವುದು ಎಂದು ಹೇಳಿದರು.</p>.<p>ಇಂತಹ ಕೃತ್ಯಗಳನ್ನು ತಡೆಯಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ನೀರಾವರಿ ಸೇರಿದಂತೆ ಇತರೆ ಇಲಾಖೆಗಳಿಗೆ ಪತ್ರ ಬರೆಯಲೂ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>