<p><strong>ಮೈಸೂರು: </strong>ಮೇಕೆದಾಟು ಹಾಗೂ ರಾಷ್ಟ್ರೀಯ ಹೆದ್ದಾರಿ 275 ಯೋಜನೆಗಳು ಸಿದ್ದರಾಮಯ್ಯ ಅವರ ಕೊಡುಗೆಗಳು. ಇದು ಸುಳ್ಳೆಂದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿಯಾಗುವೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.</p>.<p>‘ಯೋಜನೆಗಳು ಬಿಜೆಪಿ ಸರ್ಕಾರದ ಕೊಡುಗೆಗಳು ಎಂದು ಹೇಳಿರುವ ಸಂಸದ ಪ್ರತಾಪ ಸಿಂಹ ಅದನ್ನು ಸಾಬೀತು ಮಾಡದಿದ್ದರೆ ಅವರನ್ನು ಸುಳ್ಳುಗಾರ ಪ್ರತಾಪಸಿಂಹ ಎಂದು ಕರೆಯಬೇಕಾಗುತ್ತದೆ’ ಎಂದು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.</p>.<p>‘ಸಿದ್ದರಾಮಯ್ಯ 2017ರಲ್ಲಿ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಿದ್ದರು. 2014ರಲ್ಲಿ ರಾಷ್ಟ್ರೀಯ ಹೆದ್ದಾರಿ 275ಕ್ಕಾಗಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಜತೆ ಮಾತುಕತೆ ನಡೆಸಿದ್ದರು’ ಎಂದರು.</p>.<p>ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮಾಧ್ಯಮ ವಕ್ತಾರ ಮಹೇಶ್, ಕೆಪಿಸಿಸಿ ಸದಸ್ಯ ಶ್ರೀನಾಥ್ಬಾಬು, ಗ್ರಾಮಾಂತರ ಯೂತ್ ಕಾಂಗ್ರೆಸ್ ಅಧ್ಯಕ್ಷ ಡೊನಾಲ್ಡ್, ನಗರ ಸೇವಾ ದಳ ಅಧ್ಯಕ್ಷ ಗಿರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮೇಕೆದಾಟು ಹಾಗೂ ರಾಷ್ಟ್ರೀಯ ಹೆದ್ದಾರಿ 275 ಯೋಜನೆಗಳು ಸಿದ್ದರಾಮಯ್ಯ ಅವರ ಕೊಡುಗೆಗಳು. ಇದು ಸುಳ್ಳೆಂದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿಯಾಗುವೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.</p>.<p>‘ಯೋಜನೆಗಳು ಬಿಜೆಪಿ ಸರ್ಕಾರದ ಕೊಡುಗೆಗಳು ಎಂದು ಹೇಳಿರುವ ಸಂಸದ ಪ್ರತಾಪ ಸಿಂಹ ಅದನ್ನು ಸಾಬೀತು ಮಾಡದಿದ್ದರೆ ಅವರನ್ನು ಸುಳ್ಳುಗಾರ ಪ್ರತಾಪಸಿಂಹ ಎಂದು ಕರೆಯಬೇಕಾಗುತ್ತದೆ’ ಎಂದು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.</p>.<p>‘ಸಿದ್ದರಾಮಯ್ಯ 2017ರಲ್ಲಿ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಿದ್ದರು. 2014ರಲ್ಲಿ ರಾಷ್ಟ್ರೀಯ ಹೆದ್ದಾರಿ 275ಕ್ಕಾಗಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಜತೆ ಮಾತುಕತೆ ನಡೆಸಿದ್ದರು’ ಎಂದರು.</p>.<p>ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮಾಧ್ಯಮ ವಕ್ತಾರ ಮಹೇಶ್, ಕೆಪಿಸಿಸಿ ಸದಸ್ಯ ಶ್ರೀನಾಥ್ಬಾಬು, ಗ್ರಾಮಾಂತರ ಯೂತ್ ಕಾಂಗ್ರೆಸ್ ಅಧ್ಯಕ್ಷ ಡೊನಾಲ್ಡ್, ನಗರ ಸೇವಾ ದಳ ಅಧ್ಯಕ್ಷ ಗಿರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>