<p><strong>ಮೈಸೂರು</strong>: 'ಕೋವಿಡ್ ವಿಚಾರ ಮುಂದಿಟ್ಟುಕೊಂಡು ಮೇಕೆದಾಟು ಪಾದಯಾತ್ರೆ ತಡೆಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸುತ್ತಿದೆ. ಜೈಲಿಗೆ ಕಳುಹಿಸಿದರೂ ಪರವಾಗಿಲ್ಲ ಪಾದಯಾತ್ರೆ ಮುಂದುವರಿಯಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.</p>.<p>'ಲಾಕ್ಡೌನ್ ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಲಾಕ್ಡೌನ್ ಮಾಡಲಿ, ಬೇರೆ ಏನೇ ಮಾಡಲಿ ಪಾದಯಾತ್ರೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಕೋವಿಡ್ ಇದ್ದರೂ ಮುಖ್ಯಮಂತ್ರಿ, ಮಂತ್ರಿಗಳು ಮದುವೆಯಲ್ಲಿ ಪಾಲ್ಗೊಂಡು ಮಾರ್ಗಸೂಚಿ ಉಲ್ಲಂಘಿಸಿಲ್ಲವೇ? ಅವರ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ' ಎಂದು ಸೋಮವಾರ ಇಲ್ಲಿ ಸುದ್ದಿಗೊಷ್ಠಿಯಲ್ಲಿ ಪ್ರಶ್ನಿಸಿದರು.</p>.<p>'ಮುಂಜಾಗ್ರತೆಯ ಕ್ರಮ ತೆಗೆದುಕೊಂಡು ಪಾದಯಾತ್ರೆ ನಡೆಸುತ್ತೇವೆ. ಒಂದು ಲಕ್ಷ ಮಾಸ್ಕ್ ತರಿಸಲಿದ್ದೇವೆ.10 ವೈದ್ಯಕೀಯ ತಂಡ ಇರಲಿದ್ದು, 100 ವೈದ್ಯರು ಪಾಲ್ಗೊಳ್ಳುತ್ತಾರೆ' ಎಂದು ತಿಳಿಸಿದರು.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, 'ಕೋವಿಡ್ ನೆಪ ಮುಂದಿಟ್ಟುಕೊಂಡು ಪಾದಯಾತ್ರೆ ತಡೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಏನೇ ಪ್ರಯತ್ನ ನಡೆಸಿದರೂ ನಮ್ಮ ಪಾದಯಾತ್ರೆ ತಡೆಯಲು ಆಗಲ್ಲ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: 'ಕೋವಿಡ್ ವಿಚಾರ ಮುಂದಿಟ್ಟುಕೊಂಡು ಮೇಕೆದಾಟು ಪಾದಯಾತ್ರೆ ತಡೆಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸುತ್ತಿದೆ. ಜೈಲಿಗೆ ಕಳುಹಿಸಿದರೂ ಪರವಾಗಿಲ್ಲ ಪಾದಯಾತ್ರೆ ಮುಂದುವರಿಯಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.</p>.<p>'ಲಾಕ್ಡೌನ್ ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಲಾಕ್ಡೌನ್ ಮಾಡಲಿ, ಬೇರೆ ಏನೇ ಮಾಡಲಿ ಪಾದಯಾತ್ರೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಕೋವಿಡ್ ಇದ್ದರೂ ಮುಖ್ಯಮಂತ್ರಿ, ಮಂತ್ರಿಗಳು ಮದುವೆಯಲ್ಲಿ ಪಾಲ್ಗೊಂಡು ಮಾರ್ಗಸೂಚಿ ಉಲ್ಲಂಘಿಸಿಲ್ಲವೇ? ಅವರ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ' ಎಂದು ಸೋಮವಾರ ಇಲ್ಲಿ ಸುದ್ದಿಗೊಷ್ಠಿಯಲ್ಲಿ ಪ್ರಶ್ನಿಸಿದರು.</p>.<p>'ಮುಂಜಾಗ್ರತೆಯ ಕ್ರಮ ತೆಗೆದುಕೊಂಡು ಪಾದಯಾತ್ರೆ ನಡೆಸುತ್ತೇವೆ. ಒಂದು ಲಕ್ಷ ಮಾಸ್ಕ್ ತರಿಸಲಿದ್ದೇವೆ.10 ವೈದ್ಯಕೀಯ ತಂಡ ಇರಲಿದ್ದು, 100 ವೈದ್ಯರು ಪಾಲ್ಗೊಳ್ಳುತ್ತಾರೆ' ಎಂದು ತಿಳಿಸಿದರು.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, 'ಕೋವಿಡ್ ನೆಪ ಮುಂದಿಟ್ಟುಕೊಂಡು ಪಾದಯಾತ್ರೆ ತಡೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಏನೇ ಪ್ರಯತ್ನ ನಡೆಸಿದರೂ ನಮ್ಮ ಪಾದಯಾತ್ರೆ ತಡೆಯಲು ಆಗಲ್ಲ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>