ಮೈಸೂರು: ಬಿಸಿಯೂಟ ತಯಾರಕರಿಗೆ ಜೂನ್, ಜುಲೈ ತಿಂಗಳ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.