‘ಸಚಿವರು ನಗರಕ್ಕೆ ಬರುತ್ತಿದ್ದಾಗ ಘಟನೆ ನಡೆದಿದ್ದು, ಸಯ್ಯಾಜಿರಾವ್ ರಸ್ತೆಯ ಆರ್ಎಂಸಿ ಸಮೀಪ ಸವಾರ, ಕಾರಿನ ಒಂದು ಭಾಗಕ್ಕೆ ಡಿಕ್ಕಿ ಹೊಡೆದು ಕೆಳಗೆ ಬಿದ್ದರು. ಅವರ ಎಡಗಾಲಿಗೆ ಗಾಯಗಳಾದವು. ಕೂಡಲೇ ಅವರನ್ನು ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಲಾಯಿತು. ಎರಡೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ರವಿಕುಮಾರ್ ವಿರುದ್ಧ ಐಪಿಸಿ 279, 337ರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅವರು ಮದ್ಯಸೇವಿಸಿ ವಾಹನ ಚಾಲನೆ ಮಾಡುತ್ತಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.