ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸಿರು ಪಟಾಕಿ ಎಂದರೇನು ಎಂಬುದು ನನಗೂ ಗೊತ್ತಿಲ್ಲ: ಸಚಿವ ಡಾ.ಕೆ.ಸುಧಾಕರ್

Last Updated 11 ನವೆಂಬರ್ 2020, 9:07 IST
ಅಕ್ಷರ ಗಾತ್ರ

ಮೈಸೂರು: ‘ಹಸಿರು ಪಟಾಕಿ ಎಂದರೇನು ಎಂಬುದು ನನಗೂ ಗೊತ್ತಿಲ್ಲ. ಈ ಬಗ್ಗೆ ತಿಳಿದುಕೊಂಡು ಹೇಳುತ್ತೇನೆ’ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಬುಧವಾರ ಇಲ್ಲಿ ಹೇಳಿದರು.

‘ದೀಪಾವಳಿಯಲ್ಲಿ ಪಟಾಕಿ‌ ನಿಷೇಧದ ಬಗ್ಗೆ ನಮ್ಮ ಇಲಾಖೆಯಿಂದ ತಜ್ಞರು ಮಾರ್ಗಸೂಚಿ ಸಿದ್ಧಪಡಿಸಿದ್ದರು. ಅದನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಸಲ್ಲಿಸಿದ್ದೆ. ಆ ನಂತರ ಮುಖ್ಯಮಂತ್ರಿ, ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ ನೀಡಿದ್ದಾರೆ. ಸಮಯ ಕೂಡ ನಿಗದಿ ಮಾಡಿದ್ದಾರೆ. ಆದರೆ, ಹಸಿರು ಪಟಾಕಿ ಎಂದರೇನು ಎಂಬುದು ನನಗೂ ಗೊತ್ತಿಲ್’ ಎಂದರು.

‘15 ದಿನಗಳ ಹಿಂದೆ ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಶೇ 19 ರವರೆಗೆ ಇತ್ತು. ಅದೀಗ ಶೇ 2ಕ್ಕೆ ತಗ್ಗಿದೆ. ಮರಣ ಪ್ರಮಾಣವೂ ಕಡಿಮೆ ಆಗಿದೆ’ ಎಂದು ಹೇಳಿದರು.

ಜನಸಾಮಾನ್ಯರು ಮಾಸ್ಕ್ ಧರಿಸದೆ ಇದ್ದರೆ ದಂಡ ವಿಧಿಸುತ್ತಿದ್ದು, ರಾಜಕೀಯ ಸಮಾರಂಭಗಳಲ್ಲಿ ನಿಯಮ ಉಲ್ಲಂಘನೆ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ನಾನೂ ಅಸಹಾಯಕ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT