ಮೈಸೂರು: ‘ಸಿದ್ದರಾಮಯ್ಯನವರು ವೀರಾವೇಶದಿಂದ ಮೈಸೂರಿನಲ್ಲಿ ಏನೇನೋ ಮಾತನಾಡಿದ್ದಾರೆ. ಸೆ. 21ರಂದು ಅಧಿವೇಶನ ಆರಂಭವಾಗಲಿದ್ದು, ಸದನದೊಳಗೂ ಅದೇ ರೀತಿ ಮಾತಾಡಲಿ. ಅಷ್ಟೇ ವೀರಾವೇಶದಿಂದ ಉತ್ತರ ನೀಡುವಂಥ ಶಕ್ತಿಯನ್ನು ದೇವರು ನಮಗೂ ನೀಡಿದ್ದಾನೆ’ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಶನಿವಾರ ಇಲ್ಲಿ ತಿಳಿಸಿದರು.