<p><strong>ನಂಜನಗೂಡು</strong>: ತಾಲ್ಲೂಕಿನ ಕಾರ್ಯ ಗ್ರಾಮದ ಗುರುಸ್ವಾಮಿ ಎಂಬವರಿಗೆ ಸೇರಿದ ಜಮೀನಿನಲ್ಲಿ ಮಂಗಳವಾರ ರಾತ್ರಿ ಮೊಲ ಬೇಟೆಯಾಡಲು ಬಂದೂಕಿನಿಂದ ಹಾರಿಸಿದ ಗುಂಡು ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.</p>.<p>ಕೇರಳ ರಾಜ್ಯದ ಸುಲ್ತಾನ್ ಬತ್ತೇರಿ ತಾಲ್ಲೂಕಿನ ಪಾಡಿಚರ ಗ್ರಾಮದ ಪ್ರಸನ್ನನ್ (58) ಮೃತಪಟ್ಟವರು.</p>.<p>ಕೇರಳ ಮೂಲದವರು ಗುರುಸ್ವಾಮಿ ಅವರ ಜಮೀನನ್ನು 2 ವರ್ಷದ ಅವಧಿಗೆ ಭೋಗ್ಯಕ್ಕೆ ಪಡೆದಿದ್ದು, 2 ವರ್ಷಗಳಿಂದ ಈ ಜಮೀನಿನಲ್ಲಿ ಪ್ರಸನ್ನನ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ 9 ಗಂಟೆ ಸಮಯದಲ್ಲಿ ಪಕ್ಕದ ಜಮೀನಿಂದ ಊಟ ಮಾಡಲು ತೆರಳಿದ್ದ ವೇಳೆ, ನಿಶಾದ್ ಎಂಬಾತ ಹಾರಿಸಿದ ಗುಂಡು ಪ್ರಸನ್ನನ್ ಕಾಲಿಗೆ ತಗು ಲಿದೆ. ರಕ್ತಸ್ರಾವದಿಂದ ಬಳಲಿದ್ದ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿ ಸಿದ್ದು, ಪರೀಕ್ಷಿಸಿದ ವೈದ್ಯರು ಪ್ರಸನ್ನನ್ ಮೃತ ಪಟ್ಟಿರುವುದನ್ನು ಧೃಡಪಡಿಸಿದರು.</p>.<p>ಈ ಬಗ್ಗೆ ಪ್ರಸನ್ನನ್ ಸಹೋದರ ಸುರೇಂದ್ರ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಎಎಸ್ಪಿ ಶಿವಕುಮಾರ್, ಸಿಪಿಐ ಲಕ್ಷ್ಮೀಕಾಂತ್ ತಳವಾರ್, ಪಿಎಸ್ಐ ರಾಘವೇಂದ್ರ ಕಠಾರಿಯ ಮಹಜರು ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ತಾಲ್ಲೂಕಿನ ಕಾರ್ಯ ಗ್ರಾಮದ ಗುರುಸ್ವಾಮಿ ಎಂಬವರಿಗೆ ಸೇರಿದ ಜಮೀನಿನಲ್ಲಿ ಮಂಗಳವಾರ ರಾತ್ರಿ ಮೊಲ ಬೇಟೆಯಾಡಲು ಬಂದೂಕಿನಿಂದ ಹಾರಿಸಿದ ಗುಂಡು ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.</p>.<p>ಕೇರಳ ರಾಜ್ಯದ ಸುಲ್ತಾನ್ ಬತ್ತೇರಿ ತಾಲ್ಲೂಕಿನ ಪಾಡಿಚರ ಗ್ರಾಮದ ಪ್ರಸನ್ನನ್ (58) ಮೃತಪಟ್ಟವರು.</p>.<p>ಕೇರಳ ಮೂಲದವರು ಗುರುಸ್ವಾಮಿ ಅವರ ಜಮೀನನ್ನು 2 ವರ್ಷದ ಅವಧಿಗೆ ಭೋಗ್ಯಕ್ಕೆ ಪಡೆದಿದ್ದು, 2 ವರ್ಷಗಳಿಂದ ಈ ಜಮೀನಿನಲ್ಲಿ ಪ್ರಸನ್ನನ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ 9 ಗಂಟೆ ಸಮಯದಲ್ಲಿ ಪಕ್ಕದ ಜಮೀನಿಂದ ಊಟ ಮಾಡಲು ತೆರಳಿದ್ದ ವೇಳೆ, ನಿಶಾದ್ ಎಂಬಾತ ಹಾರಿಸಿದ ಗುಂಡು ಪ್ರಸನ್ನನ್ ಕಾಲಿಗೆ ತಗು ಲಿದೆ. ರಕ್ತಸ್ರಾವದಿಂದ ಬಳಲಿದ್ದ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿ ಸಿದ್ದು, ಪರೀಕ್ಷಿಸಿದ ವೈದ್ಯರು ಪ್ರಸನ್ನನ್ ಮೃತ ಪಟ್ಟಿರುವುದನ್ನು ಧೃಡಪಡಿಸಿದರು.</p>.<p>ಈ ಬಗ್ಗೆ ಪ್ರಸನ್ನನ್ ಸಹೋದರ ಸುರೇಂದ್ರ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಎಎಸ್ಪಿ ಶಿವಕುಮಾರ್, ಸಿಪಿಐ ಲಕ್ಷ್ಮೀಕಾಂತ್ ತಳವಾರ್, ಪಿಎಸ್ಐ ರಾಘವೇಂದ್ರ ಕಠಾರಿಯ ಮಹಜರು ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>