ಮೈಸೂರು: ಇಲ್ಲಿನ ಜಯಚಾಮರಾಜ ಒಡೆಯರ್ (ಹಾರ್ಡಿಂಗ್) ವೃತ್ತದಲ್ಲಿ ಕುಮಾರ್ ಎಂಬುವವರು ಮೀನಿನ ಅಂಗಡಿ ಬಳಿ ಮೀನನ್ನು ಸೇವಿಸುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿಯೊಬ್ಬ ಅವರ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ರಾತ್ರಿ 9 ಗಂಟೆ ಸಮಯದಲ್ಲಿ ಕುಮಾರ್ ಅವರು ಒಂದು ಕೈಯಲ್ಲಿ ಮೊಬೈಲ್ ಹಿಡಿದು, ಮತ್ತೊಂದು ಕೈಯಲ್ಲಿ ತಿನಿಸಿನ ತಟ್ಟೆ ಹಿಡಿದುಕೊಂಡಿದ್ದರು. ಈ ವೇಳೆ ಪಕ್ಕದಲ್ಲೇ ತಿಂಡಿ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮೊಬೈಲ್ ಕಿತ್ತುಕೊಂಡು ಓಡಿ ಹೋಗಿದ್ದಾನೆ. ಪ್ರಕರಣ ನಜರ್ಬಾದ್ ಠಾಣೆಯಲ್ಲಿ ದಾಖಲಾಗಿದೆ.