ಮೈಸೂರು: ನಗರದಲ್ಲಿ ಅನಗತ್ಯವಾಗಿ ಸುತ್ತಾಡುತ್ತಿದ್ದ 200ಕ್ಕೂ ಅಧಿಕ ವಾಹನ ಸವಾರರಿಂದ ಅವರ ವಾಹನಗಳನ್ನು ಪೊಲೀಸರು ಜಫ್ತಿ ಮಾಡಿದ್ದಾರೆ. ಈ ಮೂಲಕ ಇನ್ನು ಮುಂದೆ ಅನಗತ್ಯವಾಗಿ ಸುತ್ತಾಡಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಅಗತ್ಯ ಸೇವೆಗಳನ್ನು ಬಿಟ್ಟು ಅನಗತ್ಯವಾಗಿ ದ್ವಿಚಕ್ರ ವಾಹನದಲ್ಲಿ ಇವರು ಸುತ್ತಾಡುತ್ತಿದ್ದರು. ಹಾಗಾಗಿ, ವಾಹನಗಳನ್ನು ಜಫ್ತಿ ಮಾಡಲಾಗಿದೆ. 20 ಕಾರುಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಡಿಸಿಪಿ ಪ್ರಕಾಶ್ಗೌಡ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.