‘ಇವರು ಕುಶಾಲನಗರದಿಂದ ತಮ್ಮ ನಿವಾಸಕ್ಕೆ ತೆರಳುವಾಗ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಒಂದು ಏರ್ಬ್ಯಾಗ್ ತೆರೆದುಕೊಂಡಿದ್ದರಿಂದ ಜಗದೀಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಟೈರ್ಗಳು ಸಿಡಿದಿವೆ. ವಾಹನ ನಜ್ಜುಗುಜ್ಜಾಗಿದೆ. ಅಪಘಾತ ನಡೆದಾಗ ಆ ಭಾಗದಲ್ಲಿ ಮಳೆ ಸುರಿಯುತ್ತಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.