<p><strong>ಮೈಸೂರು:</strong> ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟದ ಮುಂದಾಳತ್ವವನ್ನು ಸಾಹಿತಿ ದೇವನೂರ ಮಹಾದೇವ ವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.</p>.<p>ರೈತರ ವಿರೋಧದ ನಡುವೆಯೂ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಇದು ಇನ್ನು 6 ತಿಂಗಳಲ್ಲಿ ಶಾಸನಸಭೆಗೆ ಚರ್ಚೆಗೆ ಬಂದು ಕಾಯ್ದೆಯಾಗಲಿದೆ. ಅಷ್ಟರಲ್ಲಿ ಎಲ್ಲ ಸಂಘಟನೆಗಳೂ ಒಂದುಗೂಡಿ ಒಗ್ಗಟ್ಟಿನ ಹೋರಾಟ ನಡೆಸಬೇಕಿದೆ. ಇದಕ್ಕೆ ನಮ್ಮ ನಾಡಿನ ಸಾಕ್ಷಿಪ್ರಜ್ಞೆ ಎನಿಸಿದ ದೇವನೂರ ಮಹಾದೇವ ನೇತೃತ್ವ ವಹಿಸಬೇಕು ಎಂದು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ, ಆರ್ಎಸ್ಎಸ್ ಮುಖ್ಯಸ್ಥರು ರೈತರಿಗೆ ಮಾರಕವಾಗಿರುವ ತಿದ್ದುಪಡಿ ವಿರುದ್ಧ ದನಿ ಎತ್ತಬೇಕು ಎಂದು ಮನವಿ ಮಾಡಿದರು.</p>.<p><strong>ರೈತ ಹುತಾತ್ಮ ದಿನಾಚರಣೆ</strong></p>.<p>ತಾಲ್ಲೂಕಿನ ಮಂಡಕಳ್ಳಿಯ ಸಮೀಪ ಇರುವ ಒಡನಾಡಿ ಸೇವಾ ಸಂಸ್ಥೆಯ ಸಭಾಂಗಣದಲ್ಲಿ ಜುಲೈ 21ರಂದು ಬೆಳಿಗ್ಗೆ 11 ಗಂಟೆಗೆ ರೈತ ಹುತಾತ್ಮ ದಿನಾಚರಣೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.</p>.<p>ಅಂದು ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿಯಿಂದಾಗುವ ಪರಿಣಾಮಗಳ ಬಗ್ಗೆ ಕೆ.ಪಿ.ಸುರೇಶ್ ಮಾತನಾಡುವರು. ಸಂಘಟನೆಯ ಆಯ್ದ 50 ಮಂದಿ ಮಾತ್ರ ಇಲ್ಲಿ ಭಾಗವಹಿಸಲಿದ್ದಾರೆ ಎಂದು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಜುಲೈ 21ರಂದು ಕರೆ ನೀಡಿದ್ದ ವಿಧಾನಸೌಧ ಮುತ್ತಿಗೆ ಚಳವಳಿಯನ್ನು ಲಾಕ್ಡೌನ್ ಕಾರಣದಿಂದ ತಾತ್ಕಾಲಿಕವಾಗಿ ವಾಪಸ್ ತೆಗೆದುಕೊಳ್ಳಲಾಗಿದೆ. ಸದ್ಯದಲ್ಲೇ ರೈತ ಮಹಿಳೆಯರು ಕಸಪೊರಕೆ ಹಾಗೂ ಪುರುಷರು ಬಾರುಕೋಲು ಹಿಡಿದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಹೇಳಿದರು.</p>.<p>21ರಂದು ವಿಧಾನಸೌಧ ಮುತ್ತಿಗೆಯ ಬದಲು ಪ್ರತಿ ಜಿಲ್ಲೆಗಳಲ್ಲೂ ರೈತ ವಿರೋಧಿ ಕಾನೂನುಗಳ ವಿರುದ್ಧ ಹೋರಾಟ ನಡೆಯಲಿದೆ ಎಂದರು.</p>.<p>ತಿದ್ದುಪಡಿಯ ಹಿಂದೆ ಭ್ರಷ್ಟಾಚಾರದ ಕೂಪವೇ ಇದೆ. ವಿಶೇಷವಾಗಿ ಬೆಂಗಳೂರು ಸುತ್ತಮುತ್ತ ಇರುವ ರಿಯಲ್ ಎಸ್ಟೇಟ್ ಮಾಫಿಯಾ ಇದೆ. ಒಂದು ವೇಳೆ ರೈತರು ಭೂಮಿ ಮಾರಾಟ ಮಾಡಲೇಬೇಕು ಎಂದಿದ್ದರೆ ರೈತರಿಗೆ ಮಾರಾಟ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡ ಅಶ್ವಥನಾರಾಯಣ ರಾಜೇ ಅರಸ್, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಮರಂಕಯ್ಯ, ಸ್ವರಾಜ್ ಇಂಡಿಯಾದ ಎನ್.ಪುನೀತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟದ ಮುಂದಾಳತ್ವವನ್ನು ಸಾಹಿತಿ ದೇವನೂರ ಮಹಾದೇವ ವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.</p>.<p>ರೈತರ ವಿರೋಧದ ನಡುವೆಯೂ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಇದು ಇನ್ನು 6 ತಿಂಗಳಲ್ಲಿ ಶಾಸನಸಭೆಗೆ ಚರ್ಚೆಗೆ ಬಂದು ಕಾಯ್ದೆಯಾಗಲಿದೆ. ಅಷ್ಟರಲ್ಲಿ ಎಲ್ಲ ಸಂಘಟನೆಗಳೂ ಒಂದುಗೂಡಿ ಒಗ್ಗಟ್ಟಿನ ಹೋರಾಟ ನಡೆಸಬೇಕಿದೆ. ಇದಕ್ಕೆ ನಮ್ಮ ನಾಡಿನ ಸಾಕ್ಷಿಪ್ರಜ್ಞೆ ಎನಿಸಿದ ದೇವನೂರ ಮಹಾದೇವ ನೇತೃತ್ವ ವಹಿಸಬೇಕು ಎಂದು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ, ಆರ್ಎಸ್ಎಸ್ ಮುಖ್ಯಸ್ಥರು ರೈತರಿಗೆ ಮಾರಕವಾಗಿರುವ ತಿದ್ದುಪಡಿ ವಿರುದ್ಧ ದನಿ ಎತ್ತಬೇಕು ಎಂದು ಮನವಿ ಮಾಡಿದರು.</p>.<p><strong>ರೈತ ಹುತಾತ್ಮ ದಿನಾಚರಣೆ</strong></p>.<p>ತಾಲ್ಲೂಕಿನ ಮಂಡಕಳ್ಳಿಯ ಸಮೀಪ ಇರುವ ಒಡನಾಡಿ ಸೇವಾ ಸಂಸ್ಥೆಯ ಸಭಾಂಗಣದಲ್ಲಿ ಜುಲೈ 21ರಂದು ಬೆಳಿಗ್ಗೆ 11 ಗಂಟೆಗೆ ರೈತ ಹುತಾತ್ಮ ದಿನಾಚರಣೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.</p>.<p>ಅಂದು ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿಯಿಂದಾಗುವ ಪರಿಣಾಮಗಳ ಬಗ್ಗೆ ಕೆ.ಪಿ.ಸುರೇಶ್ ಮಾತನಾಡುವರು. ಸಂಘಟನೆಯ ಆಯ್ದ 50 ಮಂದಿ ಮಾತ್ರ ಇಲ್ಲಿ ಭಾಗವಹಿಸಲಿದ್ದಾರೆ ಎಂದು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಜುಲೈ 21ರಂದು ಕರೆ ನೀಡಿದ್ದ ವಿಧಾನಸೌಧ ಮುತ್ತಿಗೆ ಚಳವಳಿಯನ್ನು ಲಾಕ್ಡೌನ್ ಕಾರಣದಿಂದ ತಾತ್ಕಾಲಿಕವಾಗಿ ವಾಪಸ್ ತೆಗೆದುಕೊಳ್ಳಲಾಗಿದೆ. ಸದ್ಯದಲ್ಲೇ ರೈತ ಮಹಿಳೆಯರು ಕಸಪೊರಕೆ ಹಾಗೂ ಪುರುಷರು ಬಾರುಕೋಲು ಹಿಡಿದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಹೇಳಿದರು.</p>.<p>21ರಂದು ವಿಧಾನಸೌಧ ಮುತ್ತಿಗೆಯ ಬದಲು ಪ್ರತಿ ಜಿಲ್ಲೆಗಳಲ್ಲೂ ರೈತ ವಿರೋಧಿ ಕಾನೂನುಗಳ ವಿರುದ್ಧ ಹೋರಾಟ ನಡೆಯಲಿದೆ ಎಂದರು.</p>.<p>ತಿದ್ದುಪಡಿಯ ಹಿಂದೆ ಭ್ರಷ್ಟಾಚಾರದ ಕೂಪವೇ ಇದೆ. ವಿಶೇಷವಾಗಿ ಬೆಂಗಳೂರು ಸುತ್ತಮುತ್ತ ಇರುವ ರಿಯಲ್ ಎಸ್ಟೇಟ್ ಮಾಫಿಯಾ ಇದೆ. ಒಂದು ವೇಳೆ ರೈತರು ಭೂಮಿ ಮಾರಾಟ ಮಾಡಲೇಬೇಕು ಎಂದಿದ್ದರೆ ರೈತರಿಗೆ ಮಾರಾಟ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡ ಅಶ್ವಥನಾರಾಯಣ ರಾಜೇ ಅರಸ್, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಮರಂಕಯ್ಯ, ಸ್ವರಾಜ್ ಇಂಡಿಯಾದ ಎನ್.ಪುನೀತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>