<p><strong>ಮೈಸೂರು: </strong>ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿ ನಿರ್ವಹಣೆಗೆ ನೀಡುವುದನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳ ನಡೆಗೆ ಸಂಸದೆ ಸುಮಲತಾ ಸೋಮವಾರ ಇಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಿಮ್ಮದೇ ಆಡಳಿತದಲ್ಲಿ ಖಾಸಗಿಯವರ ನಿರ್ವಹಣೆಗೆ ನೀಡಲು ಮುಂದಾದಾಗ ಯಾರ ವಿರೋಧವೂ ಇರಲಿಲ್ಲ. ಈಗಿನ ಸರ್ಕಾರ ಪ್ರಕ್ರಿಯೆ ನಡೆಸುತ್ತಿದ್ದಂತೆ ವಿರೋಧ ವ್ಯಕ್ತಪಡಿಸುವುದು ಏತಕ್ಕಾಗಿ? ನಿಮ್ಮ ಉದ್ದೇಶವಾದರೂ ಏನು? ರೈತರಿಗೆ ಅನುಕೂಲವಾಗುವುದು ಬೇಡವೇ’ ಎಂದು ಪ್ರಶ್ನಿಸಿದರು.</p>.<p>‘₹ 420 ಕೋಟಿ ಬಂಡವಾಳ ಹೂಡಿದರೂ ಪ್ರತಿಫಲ ಸಿಕ್ಕಿಲ್ಲ. ಸರ್ಕಾರದಿಂದ ನಿರ್ವಹಣೆ ಮಾಡಲು ಸಾಧ್ಯವಿಲ್ಲ ಎಂದೇ ಮುಖ್ಯಮಂತ್ರಿ ತಿಳಿಸಿದ್ದಾರೆ. ಭ್ರಷ್ಟಾಚಾರ, ಹಣ ದುರ್ಬಳಕೆಯಿಂದ ನಲುಗಿರುವ ಮೈಶುಗರ್ಗೆ ಪುನಶ್ಚೇತನ ನೀಡುವುದು ಎಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ನನ್ನ ಯತ್ನವೂ ನಡೆದಿದೆ’ ಎಂದರು.</p>.<p>‘ಸಹಕಾರಿ ಸಕ್ಕರೆ ಕಾರ್ಖಾನೆಗಳ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸುವೆ. ರೈತರಿಗೆ ಒಳಿತನ್ನು ಮಾಡುವುದಕ್ಕಾಗಿಯೇ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರ ನಿರ್ವಹಣೆಗೆ ವಹಿಸಿಕೊಟ್ಟಿದ್ದು, ಅಕ್ಟೋಬರ್ ವೇಳೆಗೆ ಪುನರಾರಂಭಗೊಳ್ಳುವ ವಿಶ್ವಾಸವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಸರ್ಕಾರಕ್ಕೆ ಸಾಧ್ಯವಿಲ್ಲ: ‘ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸರ್ಕಾರದಿಂದ ನಡೆಸಲು ಸಾಧ್ಯವಾಗುತ್ತಿಲ್ಲ ಎಂದೇ ಖಾಸಗಿಯವರಿಗೆ ವಹಿಸಿದ್ದೇವೆ. ನಿರಾಣಿ ಗ್ರೂಪ್ ಕಂಪನಿಗೆ ಒಳ್ಳೆಯ ಹೆಸರಿದೆ. ಖಾಸಗೀಕರಣದಿಂದ ಕಾರ್ಖಾನೆ ಅಭಿವೃದ್ಧಿಗೊಳ್ಳಲಿದೆ. ₹ 430 ಕೋಟಿ ಬಂಡವಾಳ ತೊಡಗಿಸಿ, ಸ್ಥಳೀಯ ಎಲ್ಲ ಸಮಸ್ಯೆ ಬಗೆಹರಿಸಲಿದ್ದಾರೆ. ಒಂದೆರಡು ದಿನಗಳಲ್ಲಿ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಕಾರ್ಖಾನೆಯ ಕಾರ್ಮಿಕರು, ರೈತರ ಸಮಸ್ಯೆ ಆಲಿಸಲಿದ್ದಾರೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿ ನಿರ್ವಹಣೆಗೆ ನೀಡುವುದನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳ ನಡೆಗೆ ಸಂಸದೆ ಸುಮಲತಾ ಸೋಮವಾರ ಇಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಿಮ್ಮದೇ ಆಡಳಿತದಲ್ಲಿ ಖಾಸಗಿಯವರ ನಿರ್ವಹಣೆಗೆ ನೀಡಲು ಮುಂದಾದಾಗ ಯಾರ ವಿರೋಧವೂ ಇರಲಿಲ್ಲ. ಈಗಿನ ಸರ್ಕಾರ ಪ್ರಕ್ರಿಯೆ ನಡೆಸುತ್ತಿದ್ದಂತೆ ವಿರೋಧ ವ್ಯಕ್ತಪಡಿಸುವುದು ಏತಕ್ಕಾಗಿ? ನಿಮ್ಮ ಉದ್ದೇಶವಾದರೂ ಏನು? ರೈತರಿಗೆ ಅನುಕೂಲವಾಗುವುದು ಬೇಡವೇ’ ಎಂದು ಪ್ರಶ್ನಿಸಿದರು.</p>.<p>‘₹ 420 ಕೋಟಿ ಬಂಡವಾಳ ಹೂಡಿದರೂ ಪ್ರತಿಫಲ ಸಿಕ್ಕಿಲ್ಲ. ಸರ್ಕಾರದಿಂದ ನಿರ್ವಹಣೆ ಮಾಡಲು ಸಾಧ್ಯವಿಲ್ಲ ಎಂದೇ ಮುಖ್ಯಮಂತ್ರಿ ತಿಳಿಸಿದ್ದಾರೆ. ಭ್ರಷ್ಟಾಚಾರ, ಹಣ ದುರ್ಬಳಕೆಯಿಂದ ನಲುಗಿರುವ ಮೈಶುಗರ್ಗೆ ಪುನಶ್ಚೇತನ ನೀಡುವುದು ಎಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ನನ್ನ ಯತ್ನವೂ ನಡೆದಿದೆ’ ಎಂದರು.</p>.<p>‘ಸಹಕಾರಿ ಸಕ್ಕರೆ ಕಾರ್ಖಾನೆಗಳ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸುವೆ. ರೈತರಿಗೆ ಒಳಿತನ್ನು ಮಾಡುವುದಕ್ಕಾಗಿಯೇ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರ ನಿರ್ವಹಣೆಗೆ ವಹಿಸಿಕೊಟ್ಟಿದ್ದು, ಅಕ್ಟೋಬರ್ ವೇಳೆಗೆ ಪುನರಾರಂಭಗೊಳ್ಳುವ ವಿಶ್ವಾಸವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಸರ್ಕಾರಕ್ಕೆ ಸಾಧ್ಯವಿಲ್ಲ: ‘ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸರ್ಕಾರದಿಂದ ನಡೆಸಲು ಸಾಧ್ಯವಾಗುತ್ತಿಲ್ಲ ಎಂದೇ ಖಾಸಗಿಯವರಿಗೆ ವಹಿಸಿದ್ದೇವೆ. ನಿರಾಣಿ ಗ್ರೂಪ್ ಕಂಪನಿಗೆ ಒಳ್ಳೆಯ ಹೆಸರಿದೆ. ಖಾಸಗೀಕರಣದಿಂದ ಕಾರ್ಖಾನೆ ಅಭಿವೃದ್ಧಿಗೊಳ್ಳಲಿದೆ. ₹ 430 ಕೋಟಿ ಬಂಡವಾಳ ತೊಡಗಿಸಿ, ಸ್ಥಳೀಯ ಎಲ್ಲ ಸಮಸ್ಯೆ ಬಗೆಹರಿಸಲಿದ್ದಾರೆ. ಒಂದೆರಡು ದಿನಗಳಲ್ಲಿ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಕಾರ್ಖಾನೆಯ ಕಾರ್ಮಿಕರು, ರೈತರ ಸಮಸ್ಯೆ ಆಲಿಸಲಿದ್ದಾರೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>