ಸರ್ಕಾರಕ್ಕೆ ಸಾಧ್ಯವಿಲ್ಲ: ‘ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸರ್ಕಾರದಿಂದ ನಡೆಸಲು ಸಾಧ್ಯವಾಗುತ್ತಿಲ್ಲ ಎಂದೇ ಖಾಸಗಿಯವರಿಗೆ ವಹಿಸಿದ್ದೇವೆ. ನಿರಾಣಿ ಗ್ರೂಪ್ ಕಂಪನಿಗೆ ಒಳ್ಳೆಯ ಹೆಸರಿದೆ. ಖಾಸಗೀಕರಣದಿಂದ ಕಾರ್ಖಾನೆ ಅಭಿವೃದ್ಧಿಗೊಳ್ಳಲಿದೆ. ₹ 430 ಕೋಟಿ ಬಂಡವಾಳ ತೊಡಗಿಸಿ, ಸ್ಥಳೀಯ ಎಲ್ಲ ಸಮಸ್ಯೆ ಬಗೆಹರಿಸಲಿದ್ದಾರೆ. ಒಂದೆರಡು ದಿನಗಳಲ್ಲಿ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಕಾರ್ಖಾನೆಯ ಕಾರ್ಮಿಕರು, ರೈತರ ಸಮಸ್ಯೆ ಆಲಿಸಲಿದ್ದಾರೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.