ಕುರುಬಾರಹಳ್ಳಿ ಸರ್ವೆ ನಂಬರ್ ನಾಲ್ಕರ ಭೂ ತಕರಾರಿಗೆ ಸಂಬಂಧಿಸಿದಂತೆ, ಮುಡಾ ಆಯುಕ್ತರಾಗಿದ್ದ ಡಾ.ಡಿ.ಬಿ.ನಟೇಶ್ ಈ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆಯಂತೆ ಮುಡಾ ವಿರುದ್ಧವೇ ಪ್ರಕರಣ ನಡೆಸಲು ವಕೀಲರ ಶುಲ್ಕವಾಗಿ ₹ 24.05 ಲಕ್ಷ ಪಾವತಿಸಿದ್ದರು. ಇದರ ಬಗ್ಗೆ ಎಲ್ಲೆಡೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಎತ್ತಂಗಡಿ ಮಾಡಲಾಗಿದೆ.