ಸ್ಥಳೀಯ ನಿವಾಸಿ ಶ್ರೀಪಾದ್ ಮಾತನಾಡಿ ‘ರಾಜರು 375 ಕುಟುಂಬಗಳಿಗೆ ನಿವೇಶನ ನೀಡಿದ್ದರು. ಇದರಲ್ಲಿ 280ಕ್ಕೂ ಹೆಚ್ಚು ಮನೆಗಳಿಗೆ ಹಕ್ಕುಪತ್ರವಿದ್ದರೂ; ಖಾತೆಯಾಗಿಲ್ಲ. ಈ ಬಗ್ಗೆ ಮುಡಾದವರನ್ನು ಕೇಳಿದರೆ ಕೆಎಆರ್ಪಿ ಮೌಂಟೆಂಡ್ ಎಂಪ್ಲಾಯಿಸ್ ಕೋ ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ ನಿವೇಶನ ಒಳಪಟ್ಟಿದೆ ಅನ್ನುತ್ತಾರೆ. ಆದರೆ, ಈ ಸೊಸೈಟಿ ಸೂಪರ್ ಸೀಡ್ ಆಗಿ ಎಷ್ಟೋ ವರ್ಷ ಕಳೆದಿದೆ. ಪ್ರಾಧಿಕಾರದ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಸಂಬಂಧಪಟ್ಟವರು ಕೂಡಲೇ ಖಾತೆ ಮಾಡಿಸಿಕೊಳ್ಳಲು ಅಗತ್ಯವಾದ ದಾಖಲಾತಿ ಪತ್ರ ದೊರಕಿಸಿಕೊಡಬೇಕು’ ಎಂದು ಮನವಿ ಮಾಡಿದರು.